Webdunia - Bharat's app for daily news and videos

Install App

ದೀಪಾವಳಿ ಹಬ್ಬದ ಪ್ರಯುಕ್ತ ಬಿ-ಪ್ಯಾಕ್ ವತಿಯಿಂದ ಸಿಹಿ ತಿನಿಸು ವಿತರಣೆ

Webdunia
ಶುಕ್ರವಾರ, 14 ಅಕ್ಟೋಬರ್ 2022 (19:40 IST)
ಬೆಂಗಳೂರು ನಗರವನ್ನು ಸ್ವಚ್ಛ ಸುಂದರ ನಗರವನ್ನಾಗಿಡುವ ನಿಟ್ಟಿನಲ್ಲಿ‌ ಶ್ರಮವಹಿಸಿ ಕಾರ್ಯನಿರ್ವಹಿಸುವ ಸ್ವಚ್ಛತಾ ಯೋಧರಾದ ಪೌರಕಾರ್ಮಿಕರ ಶ್ರಮವನ್ನು ಗುರುತಿಸಿ  ಬಿ-ಪ್ಯಾಕ್ ಸಂಸ್ಥೆಯು ಸಿಹಿ ವಿತರಿಸುತ್ತಿದ್ದಾರೆ. ಅದರ ಭಾಗವಾಗಿ ಈ ವರ್ಷವೂ ನಗರದಲ್ಲಿರುವ ಪೌರಕಾರ್ಮಿಕರು, ಆಟೋ-ಟಿಪ್ಪರ್, ಕಾಂಪ್ಯಾಕ್ಟರ್ ಗಳ ಚಾಲಕ-ಸಿಬ್ಬಂದಿ ಹಾಗೂ ಘನತ್ಯಾಜ್ಯ ನಿರ್ವಹಣೆಯ ಸಿಬ್ಬಂದಿಗಳು ಸೇರಿದಂತೆ ಸುಮಾರು 28,000 ಪೌರಕಾರ್ಮಿಕರ ಸಿಬ್ಬಂದಿಗೆ ದೀಪಾವಳಿ ಹಬ್ಬದ ಅಂಗವಾಗಿ ಸಿಹಿ ತಿನಿಸು ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದಾರೆ.
 
ಬಿ-ಪ್ಯಾಕ್ ಸಂಸ್ಥೆಯ ವತಿಯಿಂದ ಸಿಹಿ ತಿನಿಸು ವಿತರಣೆಯನ್ನು 243 ವಾರ್ಡಿನ ಪೌರಕಾರ್ಮಿಕರಿಗೆ ಹಂಚಿಕೆ ಮಾಡುವ ಕಾರ್ಯಕ್ರಮದ ಭಾಗವಾಗಿ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್  ಇಂದು ಪಾಲಿಕೆಯ ಕೇಂದ್ರ ಕಛೇರಿ ಆವರಣದ ಕೌನ್ಸಿಲ್ ಕಟ್ಟಡದ ಮುಂಭಾಗದಲ್ಲಿ ಸಾಂಕೇತಿಕವಾಗಿ ಸಂಪಂಗಿರಾಮನಗರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸಿಹಿ ತಿನಿಸು ವಿತರಿಸಿದರು.
 
ಈ ವೇಳೆ ಬಿ.ಕ್ಲಿಪ್ ಕಾರ್ಯಕ್ರಮ ಮುಖ್ಯಸ್ಥರಾದ ರಾಘವೇಂದ್ರ ಹೆಚ್ ಎಸ್, ಸಂಪಂಗಿರಾಮನಗರ ಬಿ.ಕ್ಲಿಪ್ ನಾಯಕರಾದ ಪ್ರೇಮ್ ಕುಮಾರ್, ವಿನೋದ್ ಸಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments