Webdunia - Bharat's app for daily news and videos

Install App

ಮತ ಎಣಿಕೆಗೆ ಸಕಲ ಸಿದ್ಥತೆ ಕೈಗೊಂಡ ಜಿಲ್ಲಾಡಳಿತ

Webdunia
ಸೋಮವಾರ, 5 ನವೆಂಬರ್ 2018 (19:27 IST)
ಜಮಖಂಡಿ ವಿಧಾನಸಭೆ ಉಪಚುನಾವಣೆಯ ಫಲಿತಾಂಶ ನ.12ರಂದು ಹೊರ ಬೀಳಲಿದ್ದು, ಬಾಗಲಕೋಟೆ ಜಿಲ್ಲಾಡಳಿತ ಸಲಕ‌ಸಿದ್ದತೆಗಳನ್ನ ಮಾಡಿಕೊಂಡಿದೆ.

ಜಮಖಂಡಿ ನಗರದ ಮಿನಿವಿಧಾನಸೌಧದಲ್ಲಿ ಮತ ಎಣಿಕೆ ನಡೆಯಲಿದ್ದು, ಚುನವಣಾ ಅಧಿಕಾರಿಗಳು  ಮತ ಎಣಿಕೆಗೆ ಬೇಕಾದ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದಾರೆ. ಈ ಕುರಿತು ಮಾಹಿತಿ‌ ನೀಡಿರುವ ಬಾಗಲಕೋಟೆ‌ ಜಿಲ್ಲಾಧಿಕಾರಿ ಕೆ.ಜೆ.ಶಾಂತಾರಾಂ,  ಮತ ಎಣಿಕೆಗೆ 14 ಟೇಬಲ್ಗಳ ವ್ಯವಸ್ಥೆಯನ್ನ ಮಾಡಿಕೊಂಡಿದ್ದು, ಒಂದು ಟೇಬಲಗೆ ಮೂರುಜನ ಚುನಾವಣಾ ಸಿಬ್ಬಂದಿಯನ್ನ ನೇಮಿಸಲಾಗಿದೆ. ಏಜೆಂಟರುಗಳಿಗೆ, ಪಕ್ಷದ ಮುಖಂಡರುಗಳಿಗೆ, ಅಭ್ಯರ್ಥಿಗಳಿಗೆ ಕೂರಲು ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ.

ಇನ್ನು  ಜಿಲ್ಲಾ ಪೊಲೀಸ್ ಇಲಾಖೆ ಕೂಡ ಭದ್ರತೆ ದೃಷ್ಠಿಯಿಂದ ಈಗಾಗಲೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಬಾಗಲಕೋಟೆ ಎಸ್ ಪಿ ಸಿ.ಬಿ.ರಿಷ್ಯಂತ್, ಮತ ಎಣಿಕೆ ಕೇಂದ್ರದ 50 ಮೀಟರ್ ಹೊರಗಡೆ ಬ್ಯಾರಿಗೇಡ್ ಗಳನ್ನು ಹಾಕಲಾಗುತ್ತೆ. 50 ಮೀಟರ್ ಒಳಗಡೆ ಯಾರಿಗೂ ಪ್ರವೇಶ ಇರೋದಿಲ್ಲ. ಪೊಲೀಸ್, ಚುನಾವಣಾ ಸಿಬ್ಬಂದಿ ಹಾಗೂ ಎಜೆಂಟರ್ ಗಳಿಗೆ ಮಾತ್ರ 50ಮೀಟರ್ ಒಳಗೆ ಪ್ರವೇಶಕ್ಕೆ ಅವಕಾಶ ಇದೆ ಅಂತಾ ತಿಳಿಸಿದ್ದಾರೆ.

 ಇನ್ನು ಕೆಎಸ್ ಆರ್ ಪಿ, ಡಿಎಆರ್, ಸಿಐಎಸ್ಎಫ್ ಹಾಗೂ ಪೊಲೀಸ್ ಇಲಾಖೆಯವ್ರು ಸೇರಿ ಅಂದಾಜು 500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಫಲಿತಾಂಶದ ಬಳಿಕ ಗೊಂದಲ ಉಂಟಾಗುವ ಜಮಖಂಡಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಬಿಗಿ ಬಂದೋಬಸ್ತ್ ಗೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಗಲಾಟೆ ಸಂಭವಿಸಬಹುದಾದಂತಹ ಗ್ರಾಮಗಳಲ್ಲೂ ಈಗಾಗಲೇ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದ್ದೇವೆ. 48 ಗಂಟೆಗಳ ಕಾಲ ಕ್ಷೇತ್ರದಾದ್ಯಂತ ಮಧ್ಯ ನಿಷೇಧ ಕೂಡಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments