Webdunia - Bharat's app for daily news and videos

Install App

ಎಂಇಎಸ್ ಪುಂಡರಿಗೆ ಜಿಲ್ಲಾಡಳಿತ ತಕ್ಕ ಪಾಠ

Webdunia
ಮಂಗಳವಾರ, 27 ಡಿಸೆಂಬರ್ 2016 (11:34 IST)
ಗಡಿಜಿಲ್ಲೆ ಬೆಳಗಾವಿಯಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಎಂಇಎಸ್ ಪುಂಡರಿಗೆ ಜಿಲ್ಲಾಡಳಿತ ತಕ್ಕ ಪಾಠ ಕಲಿಸಿದೆ.
 
ನಿನ್ನೆಯಷ್ಟೇ ಬೆಳಗಾವಿ ನಗರದ ಕಪಿಲೇಶ್ವರ್ ಮಂದಿರದ ಬಳಿ ಉದ್ಘಾಟನೆಯಾಗಿರುವ ರೈಲ್ವೆ ಮೇಲ್ಸೆತುವೆಯ ಮೇಲೆ ಎಂಇಎಸ್ ಪುಂಡರು ಛತ್ರಪತಿ ಶಿವಾಜಿ ಮಹಾರಾಜ ರಸ್ತೆ ಬೆಳಗಾಂವ್ ಎಂದು ಮರಾಠಿ ಭಾಷೆಯಲ್ಲಿ ನಾಮ ಫಲಕ ಹಾಕಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ವಿವಾದಿತ ನಾಮಫಲಕವನ್ನು ತೆರವುಗೊಳಿಸಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. 
 
ಮೇಲ್ಸೆತುವೆಯ ಉದ್ಘಾಟನೆ ಬಳಿಕ ಬೆಳಗಾವಿ ಜನತೆ ಇದನ್ನು ಕಪಿಲೇಶ್ವರ್ ರೈಲ್ವೆ ಓವರ್ ಬ್ರಿಜ್ಡ್ ಎಂದು ಕರೆಯುತ್ತಿದ್ದಾರೆ. ಆದರೆ, ಎಂಇಎಸ್ ಪುಂಡರು ಇದನ್ನು ಛತ್ರಪತಿ ಶಿವಾಜಿ ಮಹಾರಾಜ ರಸ್ತೆ ಎಂದು ಹೆಸರಿಸುವ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದಾರೆ. 
 
ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ವಿವಾದಿತ ನಾಮಫಲಕವನ್ನು ತೆರವುಗೊಳಿಸಿದ್ದು, ನಾಮಫಲಕ ತೆರವಾದ ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಭದ್ರತೆ ಕಲ್ಪಿಸಿಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಮುಂದಿನ ಸುದ್ದಿ
Show comments