Webdunia - Bharat's app for daily news and videos

Install App

ಜಿಲ್ಲಾ ಕ್ರೀಡಾಂಗಣ ಕಾಮಗಾರಿ: ಜಂಟಿ ಸರ್ವೇಗೆ ಆರ್ ಸಿ ಸೂಚಿಸಿದ್ದು ಏಕೆ ಗೊತ್ತಾ?

Webdunia
ಗುರುವಾರ, 15 ನವೆಂಬರ್ 2018 (13:58 IST)
ಬಿಸಿಲೂರು ಖ್ಯಾತಿಯ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಕುರಿತು ನಿರ್ಮಿತಿ ಕೇಂದ್ರ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು  ಜಂಟಿ ಸರ್ವೇ ಮಾಡಬೇಕೆಂದು ಆರ್ ಸಿ ಸೂಚನೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿನ ಎಲ್ಲಾ ಕಾಮಗಾರಿಗಳ ವಸ್ತುಸ್ಥಿತಿ ಬಗ್ಗೆ ವರದಿ ಸಲ್ಲಿಸುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೆಚ್.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಸುಬೋಧ ಯಾದವ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯ ತಮ್ಮ ಕೊಠಡಿಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಅನುಷ್ಠಾನ ಎಜೆನ್ಸಿ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೀಡಾಂಗಣದಲ್ಲಿ ಯಾವುದೇ ಕಾಮಗಾರಿಗೆ ಕ್ರಿಯಾ ಯೋಜನೆ ರೂಪಿಸುವ ಮುನ್ನ ಇದರ ಬಳಕೆದಾರರಾಗಿರುವ ಕ್ರೀಡಾಪಟುಗಳಿಂದ ಅಗತ್ಯ ಸಲಹೆ ಪಡೆದು ಕಾರ್ಯಾನುಷ್ಠಾನ ಮಾಡಿದರೆ ಒಳಿತು ಎಂದರು.

41.98 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಾಕೋಜಿ ಹಾಗೂ ಸ್ಪಾ ವೆಲ್‍ನೆಸ್ ಸೆಂಟರ್ ಕಾಮಗಾರಿಯನ್ನು ಇದೇ ನವೆಂಬರ್ ಮಾಹೆಯ ಅಂತ್ಯದ ವರೆಗೆ ಪೂರ್ಣಗೊಳಿಸಿ ಕ್ರೀಡಾಂಗಣ ಸಮಿತಿಗೆ ಹಸ್ತಾಂತರಿಸಬೇಕು. ಕ್ರೀಡಾಂಗಣದಲ್ಲಿ ನಿರ್ಮಿತಿ ಕೇಂದ್ರದಿಂದ ಕೈಗೊಳ್ಳಲಾದ ಕಾಮಗಾರಿಗಳ ಪೈಕಿ ಸಣ್ಣ ಪುಟ್ಟ ದುರಸ್ತಿಗಳಿದ್ದು, ಅವುಗಳನೆಲ್ಲ ಕೂಡಲೇ ಸರಿಪಡಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸುಬೋಧ ಯಾದವ ನಿರ್ದೇಶನ ನೀಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments