Select Your Language

Notifications

webdunia
webdunia
webdunia
webdunia

ದಿವಾಕರ ಶಾಸ್ತ್ರಿಗೆ ಗುಂಡಿಟ್ಟು ಕೊಲ್ಲುವ ಬೆದರಿಕೆ ಕರೆ

ದಿವಾಕರ ಶಾಸ್ತ್ರಿಗೆ ಗುಂಡಿಟ್ಟು ಕೊಲ್ಲುವ ಬೆದರಿಕೆ ಕರೆ
ಬೆಂಗಳೂರು , ಶುಕ್ರವಾರ, 31 ಅಕ್ಟೋಬರ್ 2014 (20:21 IST)
ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಮಾಡಿದ  ರಾಮಕಥಾ ಗಾಯಕಿ ಪ್ರೇಮಲತಾ, ಪ್ರೇಮಲತಾ ಪತಿ ದಿವಾಕರ ಶಾಸ್ತ್ರಿಗೆ ಬೆದರಿಕೆ ಕರೆಗಳು ಬಂದಿವೆ. ಗುಂಡಿಟ್ಟು ಕೊಲ್ಲುವುದಾಗಿ ದೂರವಾಣಿ ಮೂಲಕ ಬೆದರಿಕೆ ಹಾಕಲಾಗಿದ್ದು, ಭಯಭೀತರಾದ ದಂಪತಿ ತಮಗೆ ರಕ್ಷಣೆ ನೀಡುವಂತೆ ಬನಶಂಕರಿ ಪೊಲೀಸರಿಗೆ ಮೊರೆ ಹೋಗಿದ್ದಾರೆ.  ದೂರುದಾರ ದಂಪತಿಗೆ ಕಲಿ ಯೋಗೇಶ್‌ನಿಂದ ಬೆದರಿಕೆ ಕರೆ ಬಂದಿರುವುದಾಗಿ ತಿಳಿದುಬಂದಿದೆ.
 
ಈ ಹಿಂದೆ ದಿವಾಕರ ಶಾಸ್ತ್ರಿ ಸಹೋದರ ಶ್ಯಾಮ ಶಾಸ್ತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.. ರಾಮಚಂದ್ರಾಪುರ ಮಠದ ಶ್ರೀಗಳ ಶಿಷ್ಯರಿಂದ ಬೆದರಿಕೆ  ಕರೆಗಳು ಬಂದ  ಹಿನ್ನೆಲೆಯಲ್ಲಿ  ಕೆದಿಲದಲ್ಲಿದ್ದ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ  ಕೆಎಂಸಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಯಿತಾದರೂ ಮೃತಪಟ್ಟಿದ್ದರು.

Share this Story:

Follow Webdunia kannada