Webdunia - Bharat's app for daily news and videos

Install App

ಕಣ್ಣೀರಿನಲ್ಲಿ ಕುಟುಂಬ, ಪಾಲಿಕೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (21:28 IST)
ಬೆಂಗಳೂರು: ತಮ್ಮದಲ್ಲದ ತಪ್ಪಿನಿಂದ ಮಳೆಯ ಕಾರಣದಿಂದ  ಏಕಕಾಎಕಿ ಮರದ ಕೊಂಬೆ ಬಿದ್ದು ಸಿದ್ದಪ್ಪ (49) ಎನ್ನುವವವರು ಸಾವನ್ನಪ್ಪಿ ಇದೇ  ಸೆಪ್ಟೆಂಬರ್ 30 ಕ್ಕೆ ಒಂದು ವರ್ಷ ತುಂಬುತ್ತದೆ. ಚಾಲನೆ ಮಾಡುತಿದ್ದ ಬೈಕ್ ಕೂಡ ಜಖಂಗೊಂಡಿತ್ತು ಪರಿಹಾರ ನೀಡಬೇಕಾದ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ ಬೇಜವಾಬ್ದಾರಿತನದಿಂದ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ 
 
ಕಳೆದ  ವರ್ಷ ಸೆಪ್ಟೆಂಬರ್ 30 ರಂದು ಸಿದ್ದಪ್ಪ ಬೈಕ್ ನಲ್ಲಿ ತಮ್ಮ ಕೆಲ್ಸದ ನಿಮಿತ್ತ  ಹೋಗುವಾಗ ರಾಜಧಾನಿಯ  ತಿಲಕ್ ನಗರದಲ್ಲಿ  ಮೇಲೆ ಮರ ಬಿದ್ದಿತ್ತು. ಕೂಡಲೇ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ 18 ದಿನಗಳ ಸಾವು ಬದುಕಿನ ಹೊರಟಾದ ನಂತರ ಮೃತಪಟ್ಟಿದ್ದರು.
 
ಬಿಬಿಎಂಪಿ ಒಣಗಿದ ಮತ್ತು ಶಿಥಿಲಗೊಂಡಿರುವ ಮರಗಳನ್ನು ನಿರ್ವಹಣೆ ಮಾಡದಿರುವ ಕಾರಣ, ಮರದ ಕೊಂಬೆ ಸಿದ್ದಪ್ಪ ಅವರ  ಬಿದ್ದು ಸಾವನ್ನಪ್ಪಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದರು.  ಈ ದುರ್ಘಟನೆ ನಡೆದು ಒಂದು ವರ್ಷ ಕಳೆದರೂ ಪಾಲಿಕೆಯಿಂದ ಸೂಕ್ತ ಪರಿಹಾರ ಧನ ಸಿಗದೆ ಮೃತ ಸಿದ್ದಪ್ಪನ ಪತ್ನಿ ಗೀತಾ ಮತ್ತು  ಮಗಳು ನಂದಿತ ದೊರೆತಿಲ್ಲ.  
 
ಬಿಬಿಎಂಪಿಯ ಅಧಿಕಾರಿಗಳ ಮೊರೆ ಹೋದರು ಪ್ರಯೋಜನವಾಗಿಲ್ಲ. ಸಿದ್ದಪ್ಪ ಮೃತಪಟ್ಟ ಎರಡು ತಿಂಗಳಲ್ಲೇ ಕುಟುಂಬಕ್ಕೆ ಮತ್ತೊಂದು ಅಘಾತ ಬಂದೊದಗಿ ಪತ್ನಿ ಗೀತಾಗೆ ಕ್ಯಾನ್ಸರ್ ಕಾಣಿಸಿಕೊಂಡು ಜೀವನ ಕೂಡ ದುಸ್ತರವಾಗಿದೆ. 
 
ಪತ್ನಿಗೆ ಕ್ಯಾನ್ಸರ್ ಮೂರನೇ ಸ್ಟೇಜ್: 
 
ನನಗೆ ಕ್ಯಾನ್ಸರ್ ಮೂರನೇ ಸ್ಟೇಜ್ ನಲ್ಲಿದೆ. ಪ್ರಾಯಕ್ಕೆ ಬಂದಿರೋ ನನ್ನ ಮಗುಳಿಗೆ ಯಾರೂ ದಿಕ್ಕಿಲ್ಲ. ಏನಾದರೂ ಪರಿಹಾರ ಧನ, ಕೆಲಸ ಕೊಡಿಸುವಂತೆ ಪಾಲಿಕೆ ಅಧಿಕಾರಿಗಳಲ್ಲಿ ಕೇಳುತ್ತಿದ್ದೇನೆ. ಆದರೂ ಯಾವುದೇ ಪರಿಹಾರ ದೊರೆತಿಲ್ಲ ಎಂದು ಮೃತ ಸಿದ್ದಪ್ಪನ ಪತ್ನಿ ಗೀತಾ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ. 
 
 
ಪರಿಹಾರ ನೀಡದಿದ್ದರೆ ಕಾನೂನು ಹೋರಾಟ: 
 
ಬಿಬಿಎಂಪಿ ವತಿಯಿಂದ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಇಲ್ಲದಿದ್ದಲ್ಲಿ ಕಾನೂನು ಹೋರಾಟ ಮಾಡಲಾಗುವುದು. ಪ್ರಾರಂಭದಲ್ಲಿ ಸ್ವಲ್ಪ ಆಸ್ಪತ್ರೆ ಖರ್ಚಿಗೆ ಸಾರ್ವಜನಿಕರು, ಕೆಲ ಪಕ್ಷದ ಕಾರ್ಯಕರ್ತರು ಕೇಳಿಕೊಂಡಾಗ ಸಹಾಯ ಮಾಡಿದ ಪಾಲಿಕೆ ನಂತರ ಯಾವುದೇ ಪರಿಹಾರ ನೀಡಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಅಮರೇಶ್ ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments