Select Your Language

Notifications

webdunia
webdunia
webdunia
webdunia

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಎನ್ ಐ ಎ ಬಂಧಿಸಿದೆ.

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ  ಪ್ರಮುಖ ಆರೋಪಿಯನ್ನು ಎನ್ ಐ ಎ ಬಂಧಿಸಿದೆ.
bangalore , ಗುರುವಾರ, 1 ಜುಲೈ 2021 (15:23 IST)
ಗೋವಿಂದಪುರದ ನಿವಾಸಿ ಸೈಯದ್ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ.2020 ರ ಆಗಸ್ಟ್ 11 ರಂದು ಕೆ.ಜಿ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿದ್ದ ಸೈಯದ್ ಅಬ್ಬಾಸ್. ಗಲಭೆ ಬಳಿಕ ನಾಪತ್ತೆಯಾಗಿದ್ದ. ಪ್ರಕರಣ ಸಂಬಂಧ ಆಗಸ್ಟ್ 12 2020 ರಂದು ಎಫ್ಐಆರ್ ದಾಖಲಾಗಿತ್ತು.
ಎಫ್ ಐ ಆರ್ ದಾಖಲು ಬಳಿಕ ಪ್ರಕರಣವನ್ನು ಎನ್ ಐ ಎ ಗೆ ವರ್ಗಾವಣೆ ಮಾಡಲಾಗಿತ್ತು. ಸೈಯದ್ ಅಬ್ಬಾಸ್ ಗಲಭೆ ವೇಳೆ ಹಲವು ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆ ಬಳಿಕ ಠಾಣೆಗೆ ಬೆಂಕಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಎನ್ ಐ ಎ ಸ್ಪೇಷಲ್ ಕೋರ್ಟ್ ಮುಂದೆ ಹಾಜರು ಪಡಿಸಿ, ಸದ್ಯ 6 ದಿನಗಳ ಕಾಲ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದಿದ್ದೇನು?