Webdunia - Bharat's app for daily news and videos

Install App

BJPಗೆ ಡಿಕೆಶಿ ತಿರುಗೇಟು

Webdunia
ಗುರುವಾರ, 23 ಮಾರ್ಚ್ 2023 (15:38 IST)
BJP ಮತ್ತು JDS ನಾಯಕರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ವಿಚಾರ ಕುರಿತು ಬೆಂಗಳೂರಿನಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​​ ಪ್ರತಿಕ್ರಿಯಿಸಿದ್ದು, ಇನ್ನು ಅನೇಕರು ಬರ್ತಾರೆ, ನಾನು ಹೆಸರು ಹೇಳೊಲ್ಲ, ಅವರಾಗಿ ಅವರು ಬರೋರನ್ನ ಸೇರಿಸಿಕೊಳ್ತೀವಿ ಎಂದು ತಿಳಿಸಿದ್ರು. BJPಯವರು ಯಾರ್ ಯಾರಿಗೆ ಆಶ್ವಾಸನೆ ಕೊಟ್ಟಿದ್ದಾರೋ ಅವರನ್ನು ಕರೆದು ಮಾತಾಡ್ತಿದ್ದಾರೆ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಸಚಿವ ನಾರಾಯಣಗೌಡ ಬರ್ತಾರೆ ಅಂತ ನಾವು ಹೇಳಿದ್ವಾ? BJPಯವರು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಯಾಕೆ ಮುಟ್ಟಿ ನೋಡಿಕೊಳ್ತಾರೆ, ಯಾರ್ ಯಾರು ಬರ್ತಾರೆ ಅಂತ ನಾನು ಈಗಲೇ ಹೇಳೊಲ್ಲ ಎಂದು ತಿಳಿಸಿದ್ರು. SC/ST ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿ ಕಾಂಗ್ರೆಸ್​​ ವಿರುದ್ಧ ನೀಡಿದ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರ SC/ST ಸಮುದಾಯಕ್ಕೆ ಮೋಸ ಮಾಡಿದೆ. ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ಯಾವುದೇ ಮೀಸಲಾತಿ ಪ್ರಾಸ್ತಾವವೇ ಕಳಿಸಿಲ್ಲ. ಒಂದು ವೇಳೆ ಸರ್ಕಾರ ಮೀಸಲಾತಿ ವಿಚಾರ ಕೇಂದ್ರಕ್ಕೆ ಕಳುಹಿಸಿದರೇ ಅಲ್ಲಿ ಚರ್ಚೆ ಆಗಬೇಕು ಅಲ್ವ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments