Webdunia - Bharat's app for daily news and videos

Install App

ಅರಣ್ಯ ಇಲಾಖೆ ಅಧಿಕಾರಿ ಮೇಲೆ ಡಿಕೆಶಿ ಗರಂ

Webdunia
ಸೋಮವಾರ, 5 ಜೂನ್ 2023 (21:05 IST)
ಪರಿಸರಕ್ಕೆ ನಾವು ಅಡ್ಜಸ್ಟ್ ಆಗಿಲ್ಲ, ಪರಿಸರವೇ ನಮಗೆ ಅಡ್ಜಸ್ಟ್ ಆಗಿದೆ ಎಂದು ಪರಿಸರ ದಿನದ ಕುರಿತು DCM ಡಿ.ಕೆ.ಶಿವಕುಮಾರ್​ ಹೇಳಿದ್ರು.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೇ ವೇಳೆ BBMP ಅರಣ್ಯ ಇಲಾಖೆ IFS ಅಧಿಕಾರಿ ಸರಿನಾ ಸಿಕ್ಕಲಿಗಾರ್ ಮೇಲೆ ಡಿ.ಕೆ.ಶಿವಕುಮಾರ್​ ಗರಂ ಆದ್ರು.ನಿಮ್ಮ ಕೆಲಸ ಸರಿಯಿಲ್ಲ, ಬದಲಾಯಿಸಿಕೊಳ್ಳಿ. ಇಂದು ನನ್ನ ಕೈಯಲ್ಲಿ ಗಿಡ ನೆಡಿಸಿದ ರೀತಿ ಸಂಪೂರ್ಣ ಅವೈಜ್ಞಾನಿಕವಾದದ್ದು. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಡುವುದು ನನಗೆ ಇಷ್ಟವಿಲ್ಲ. ನಾವು ಮಾಡುವ ಕೆಲಸ ಶಾಶ್ವತವಾಗಿ ಇರಬೇಕೇ ಹೊರತು ತೋರಿಕೆಗೆ ಇರಬಾರದು. ಮರ ಇರುವ ಕಡೆ ಗಿಡ ನೆಡಿಸುವುದಲ್ಲ, ಮರ ಇಲ್ಲದ ಕಡೆ ಗಿಡ ನೆಡಿಸಬೇಕು. ಎಷ್ಟು ಅಂತರಕ್ಕೆ ಗಿಡ ಹಾಕಬೇಕು, ಯಾವ ಗಿಡ ಹಾಕಬೇಕು ಅನ್ನೋದು ಗೊತ್ತಿರಬೇಕು. ನಾನು ನನ್ನ ಊರಿನಲ್ಲಿ ಗಿಡಗಳನ್ನ ಬೆಳಸಿದ್ದೀನಿ, ಹೇಗೆ ಬೆಳಸಬೇಕು ಅನ್ನೋದು ನನಗೆ ಗೊತ್ತಿದೆ. ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments