ಡಿಕೆ ಶಿವಕುಮಾರ್ ಹೆಲ್ಮೆಟ್ ಇಲ್ಲದೇ ಮತ್ತೆ ಬೈಕ್ ರೈಡ್: ಟೀಕೆಗಳಿಗೂ ಡೋಂಟ್ ಕೇರ್

Krishnaveni K
ಶನಿವಾರ, 3 ಆಗಸ್ಟ್ 2024 (15:35 IST)
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಕ್ಷ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಜನಾಂದೋಲನ ಸಭೆ ನಡೆಸುತ್ತಿದ್ದು, ಇಂದೂ ಕೂಡಾ ಡಿಕೆ ಶಿವಕುಮಾರ್ ಹೆಲ್ಮೆಟ್ ಇಲ್ಲದೇ ಬೈಕ್ ರೈಡ್ ಮಾಡಿ ಟೀಕೆಗೊಳಗಾಗಿದ್ದಾರೆ.

ನಿನ್ನೆ ಜನಾಂದೋಲನ ಸಭೆಯ ಉದ್ಘಾಟನೆಗೆ ಮುನ್ನ ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಡಿಕೆ ಶಿವಕುಮಾರ್ ಬೈಕ್ ರೈಡ್ ನಡೆಸಿದ್ದರು. ಈ ವೇಳೆ ಡಿಕೆಶಿ ಸೇರಿದಂತೆ ಯಾರೊಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಟ್ರಾಫಿಕ್ ನಿಯಮಗಳು ಜನಸಮಾನಾ್ಯರಿಗೆ ಮಾತ್ರವೇ ಎಂದು ಹಲವರು ಆಕ್ರೋಶ ಹೊರಹಾಕಿದ್ದರು.

ಆದರೆ ಈ ಬಗ್ಗೆ ಟೀಕೆಗಳಿಗೂ ಡಿಕೆಶಿ ಡೋಂಟ್ ಕೇರ್ ಎಂದಿದ್ದಾರೆ. ಇಂದೂ ಜನಾಂದೋಲನ ಹೋರಾಟದ ನಿಮಿತ್ತ ಕಾಂಗ್ರೆಸ್ ವತಿಯಿಂದ ರಾಮನಗರದಲ್ಲಿ ಬೈಕ್ ರಾಲಿ ಹಮ್ಮಿಕೊಳ್ಳಲಾಗಿತ್ತು. ಈ ಬೈಕ್ ರಾಲಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಿದ್ದರು.

ಇಂದೂ ಕೂಡಾ ಅವರು ಬೈಕ್ ರಾಲಿ ವೇಳೆ ಹೆಲ್ಮೆಟ್ ಧರಿಸದೇ ಪ್ರಯಾಣಿಸಿದ್ದಾರೆ. ಡಿಕೆಶಿ ಮಾತ್ರವಲ್ಲದೇ ಎಲ್ಲಾ ಕಾರ್ಯಕರ್ತರೂ ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಮಾಡುವುದು ಕಂಡುಬಂದಿದೆ. ಇದನ್ನು ನೋಡಿ ಸಾರ್ವಜನಿಕರು ಈ ಜನ ನಾಯಕರಿಗೂ ದಂಡ ಹಾಕಿ ಎಂದು ಟ್ರಾಫಿಕ್ ಪೊಲೀಸರಿಗೆ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮುಂದಿನ ಸುದ್ದಿ
Show comments