Select Your Language

Notifications

webdunia
webdunia
webdunia
webdunia

ನಾಡದೇವತೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್‌

ಡಿಸಿಎಂ ಡಿ.ಕೆ.ಶಿವಕುಮಾರ್

Sampriya

ಮೈಸೂರು , ಶುಕ್ರವಾರ, 4 ಜುಲೈ 2025 (15:08 IST)
Photo Credit X
ಮೈಸೂರು: ತಮ್ಮ ಕುಟುಂಬಸ್ಥರ ಜತೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು ಆಷಾಢ ಮಾಸದ ಎರಡನೇ ಶುಕ್ರವಾರ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿ ಈಡುಗಾಯಿ ಒಡೆದರು.

ಡಿ ಕೆ ಶಿವಕುಮಾರ್ ತಮ್ಮ ಪತ್ನಿ ಹಾಗೂ ಮಗಳೊಂದಿಗೆ ಬೆಟ್ಟದ ಮೇಲೆ ಬಂದಾಗ ದೇವಸ್ಥಾನದ ಆಡಳಿತ ಮಂಡಳಿ ಅವರಿಗೆ ಪುಷ್ಪಮಾಲೆ ಮತ್ತು ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಸ್ವಾಗತಿಸಿತು. 

ಅವರು ನಿನ್ನೆ ನಂದಿ ಹಿಲ್ಸ್ ಕೆಳಭಾಗದಲ್ಲಿ ಭೋಗನಂದೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದ ಶಿವಕುಮಾರ್ ಚಾಮುಂಡಿ ಬೆಟ್ಟದಲ್ಲಿ ಇಂದು ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ದುಃಖ, ಕಷ್ಟಗಳನ್ನು ಸಹಿಸುವ ಶಕ್ತಿಯನ್ನು ನೀಡಲಿ, ಈ ಬಾರಿ ಕೂಡ ಇಡೀ ರಾಜ್ಯಕ್ಕೆ ಸಮೃದ್ಧಿ, ಮಳೆ ನೀಡಿ ತಾಯಿ ಚಾಮುಂಡಿ ಶಕ್ತಿ ನೀಡಲಿ, ನಾವು ಏನೇ ಕೆಲಸ ಮಾಡಬೇಕಾದರೂ ತಾಯಿಯಲ್ಲಿ ಪ್ರಾರ್ಥನೆ ಮಾಡಿಕೊಂಡು ಮುಂದುವರಿಸಿದ್ದೇವೆ. 


Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಸಂಬಂಧ ಶಂಕೆ: ವ್ಯಕ್ತಿ ಜತೆ ಪತ್ನಿ ಮಾತನಾಡುತ್ತಿರುವಾಗಲೇ ಎಂಟ್ರಿ ಕೊಟ್ಟ ಪತಿ, ಆಗಿದ್ದೆ ಬೇರೆ