Daily Horoscope

ಡಿಕೆ ಶಿವಕುಮಾರ್ ಗೂ ಇಂದು ಕೋರ್ಟ್ ತೀರ್ಪಿನ ತೂಗುಗತ್ತಿ

Krishnaveni K
ಗುರುವಾರ, 29 ಆಗಸ್ಟ್ 2024 (10:21 IST)
ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಇಂದು ಕೋರ್ಟ್ ಕಟಕಟೆಯಲ್ಲಿ ನಿಂತರೆ, ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಕೂಡಾ ಇಂದು ಕೋರ್ಟ್ ತೀರ್ಪಿನ ತೂಗುಗತ್ತಿಯಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಇಂದು ನಿರ್ಣಾಯಕ ದಿನವಾಗಿದೆ. ಅವರ ಮೇಲಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ನೀಡಿದ್ದು ಸರಿಯೋ, ತಪ್ಪೋ ಎಂದು ಇಂದು ಅಂತಿಮ ತೀರ್ಪು ಬರಲಿದೆ. ಇಂದು ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಮಹತ್ವದ ತೀರ್ಪು ನೀಡಲಿದೆ.

2019 ರಲ್ಲಿ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು. 2023 ರಲ್ಲಿ ಸಿದ್ದರಾಮಯ್ಯ ಸರ್ಕಾರ ಆದೇಶ ಹಿಂಪಡೆದಿತ್ತು. ಆದರೆ ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಸಂಜೆ ಈ ಬಗ್ಗೆ ಕೋರ್ಟ್ ತೀರ್ಪು ನೀಡಲಿದೆ. ಅಂದಿನ ಸರ್ಕಾರ ಸಿಬಿಐಗೆ ವಹಿಸಿದ್ದು ತಪ್ಪೋ ಸರಿಯೋ ಎಂದು ತೀರ್ಪು ಪ್ರಕಟವಾಗಲಿದೆ. ಇದಾದ ಬಳಿಕ ಡಿಕೆಶಿ ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ಮತ್ತೊಮ್ಮೆ ಮರು ಜೀವ ಬರಲಿದೆ. ಹೀಗಾಗಿ ಇಂದು ಡಿಕೆಶಿ ಪಾಲಿಗೆ ಮಹತ್ವದ ದಿನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments