ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

Krishnaveni K
ಸೋಮವಾರ, 24 ನವೆಂಬರ್ 2025 (11:13 IST)
ಬೆಂಗಳೂರು: ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಫೈಟ್ ನಡುವೆ ಡಿಕೆ ಶಿವಕುಮಾರ್ ಬಣ ಮತ್ತೊಂದು ಪವರ್ ಫುಲ್ ಐಡಿಯಾ ಮಾಡಿದೆ ಎನ್ನಲಾಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಇಂದು ರಾಜ್ಯ ನಾಯಕರ ಸಂದೇಶ ಹೊತ್ತು ದೆಹಲಿಗೆ ಮರಳಲಿದ್ದಾರೆ. ನಾಳೆ ಅವರು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವಿವರಣೆ ನೀಡಲಿದ್ದಾರೆ. ಇದೀಗ ರಾಹುಲ್ ಗಾಂಧಿಯೇ ನೇರವಾಗಿ ರಾಜ್ಯದ ನಾಯಕತ್ವ ವಿವಾದ ಬಗೆಹರಿಸಲು ಮುಂದಾಗಲಿದ್ದಾರೆ.

ಇದರ ನಡುವೆ ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಡಿಕೆಶಿ ಬಣ ಹೊಸ ದಾಳ ಉರುಳಿಸಿದೆ. ಹೊಸ ಶಾಸಕಾಂಗ ನಾಯಕನ ಆಯ್ಕೆಯಾಗಲೇ ಬೇಕು. ಅಧಿಕಾರ ಹಂಚಿಕೆ ಈ ಮೊದಲೇ ಒಪ್ಪಂದವಾದಂತೆ ನಡೆಯಲೇಬೇಕು. ಅದಕ್ಕಾಗಿ ಗೌಪ್ಯ ಮತದಾನವಾಗಲಿ ಎಂದು ಬೇಡಿಕೆ ಮುಂದಿಟ್ಟಿದೆ ಎನ್ನಲಾಗಿದೆ.

ಇಂದು ಡಿಕೆಶಿ ಬೆಂಬಲಿತ ಮತ್ತೊಂದು ಬಣ ದೆಹಲಿಗೆ ತೆರಳಿದೆ. ಗೌಪ್ಯ ಮತದಾನದ ಮೂಲಕ ಶಾಸಕರ ಬೆಂಬಲ ಪಡೆಯಲು ಡಿಕೆಶಿ ಬಣ ಮುಂದಾಗಿದೆ. ಇದರಿಂದ ಹೆಚ್ಚು ಶಾಸಕರ ಬೆಂಬಲ ಸಿಗಬಹುದು ಎಂಬ ನಿರೀಕ್ಷೆ ಡಿಕೆಶಿ ಬಣದ್ದು. ಡಿಕೆಶಿಗೆ ಹೆಚ್ಚು ಬಣದ ಶಾಸಕರ ಬೆಂಬಲ ಸಿಕ್ಕರೆ ಅನಿವಾರ್ಯವಾಗಿ ಸಿಎಂ ಬದಲಾವಣೆ ಮಾಡಬೇಕಾಗಬಹುದು. ಇದು ಸದ್ಯದ ಲೆಕ್ಕಾಚಾರವೆನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ರಾಮ, ಲಕ್ಷ್ಮಣರು ಕ್ರೂರಿಗಳು ಎಂದ ಬಿಟಿ ಲಲಿತಾ ನಾಯಕ್ ವಿರುದ್ಧ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments