DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 20 ಮೇ 2025 (09:21 IST)
Photo Credit: X
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಂಗಳೂರಿನಲ್ಲಿ ನಿರಂತರ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಇದರ ಪರಿಶೀಲನೆಗೆ ಬಂದಿದ್ದ ಡಿಸಿಎಂ ಡಿಕೆ ಶಿವಕುಮಾರ್, ಮಳೆ ನೀರು ನಿಲ್ಲುವುದಕ್ಕೆ ಜನ ಮನೆ ಸರಿಯಾಗಿ ಕಟ್ಟಿಕೊಳ್ಳದಿರುವುದೇ ಕಾರಣ ಎಂದಿದ್ದಾರೆ.

ನಿನ್ನೆ ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಡಿಕೆ ಶಿವಕುಮಾರ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಮಾಧ್ಯಮಗಳು ಕೆರೆಗಳು, ಕಾಲುವೆಗಳ ಹೂಳೆತ್ತದೇ ಇರುವುದೇ ನೀರು ನಿಲ್ಲುತ್ತಿರುವುದಕ್ಕೆ ಕಾರಣವಾಗುತ್ತಿದೆಯೇ ಎಂದು ಪ್ರಶ್ನೆ ಮಾಡಿವೆ.

ಇದಕ್ಕೆ ಉತ್ತರಿಸಿರುವ ಅವರು ‘ಯಾರೀ.. ಹೇಳಿದ್ದು.. ಏನೋ ಆಂತರಿಕ ಸಮಸ್ಯೆಗಳಿರುತ್ತವೆ ಅಷ್ಟೇ. ಅವರು ಮನೆ ಸರಿಯಾಗಿ ಕಟ್ಟಿಕೊಳ್ಳಬೇಕು ಅಷ್ಟೇ. ಆಗ ಏನೂ ಸಮಸ್ಯೆಯಾಗಲ್ಲ’ ಎಂದಿದ್ದಾರೆ.

ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್, ಸೋಷಿಯಲ್ ಮೀಡಿಯಾದಲ್ಲಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಾಗುತ್ತಿರುವುದು ಇದೇ ಮೊದಲಲ್ಲ, ಇದು ಹೊಸ ಸಮಸ್ಯೆಯೇನೂ ಅಲ್ಲ ಎಂದು ಟೀಕೆಗೊಳಗಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ರಸ್ತೆಯಲ್ಲಿ ಚೆಲ್ಲಿದ ಮದ್ಯವನ್ನು ನೋಡಕ್ಕಾಗದೆ ಕುಡುಕನೊಬ್ಬ ಏನ್ ಮಾಡಿದ ನೋಡಿ, Video

ಮುಂದಿನ ಸುದ್ದಿ
Show comments