ಬಿಜೆಪಿಯವರು ಬೆಂಗಳೂರಿಗಾಗಿ ಏನು ಕಡಿದು ಕಟ್ಟೆ ಹಾಕಿದ್ದಾರೆ: ಡಿಕೆ ಶಿವಕುಮಾರ್

Krishnaveni K
ಗುರುವಾರ, 5 ಸೆಪ್ಟಂಬರ್ 2024 (16:07 IST)
ಬೆಂಗಳೂರು: ರಾಜ್ಯರಾಜಧಾನಿ ಗಾರ್ಬೇಜ್ ಸಿಟಿಯಾಗುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿ ಕೇಳಿದಾಗ ಬಿಜೆಪಿಯವರು ಏನು ಕೊಡುಗೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
 
"ಬಿಜೆಪಿ ಇರುವುದೇ ಟೀಕೆ ಮಾಡಲು, ರಾಜಕಾರಣ ಮಾಡಲು. ಈ ಸಮಸ್ಯೆಗೆ ಪರಿಹಾರ ನೀಡಲು ನಾನು ಪ್ರಯತ್ನವಾದರೂ ಮಾಡುತ್ತಿದ್ದೇನೆ. ಈ ಬಗ್ಗೆ ಅಧ್ಯಯನ ಮಾಡಲು, ಚೆನ್ನೈ, ಹೈದರಬಾದ್, ಮುಂಬೈಗೆ ಭೇಟಿ ನೀಡಿದ್ದೆ. ನಗರದ ಹೊರಗೆ ಕಸ ವಿಲೇವಾರಿಗೆ ನಾಲ್ಕು ಕಡೆಗಳಲ್ಲಿ ಜಾಗ ಹುಡುಕಲಾಗಿದೆ. ಹೀಗೆ ನನ್ನದೇ ಆದ ಪ್ರಯತ್ನ ಮಾಡುತ್ತಿದ್ದೇನೆ. ಅವರು ಏನು ಮಾಡಿದ್ದಾರೆ?" ಎಂದು ಪ್ರಶ್ನಿಸಿದರು.

ಡಿಸಿಎಂ ಕೇವಲ ಪ್ರಚಾರಕ್ಕೆ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಿದ್ದು, ಕೆಲಸ ಆಗುತ್ತಿಲ್ಲ ಎಂಬ ಟೀಕೆ ಬಗ್ಗೆ ಕೇಳಿದಾಗ, "ನಾನು ಟೀಕೆಗಳಿಗೆ ಉತ್ತರ ಕೊಡುವುದಿಲ್ಲ. ನಮ್ಮ ಕೆಲಸಗಳೇ ನಿಮ್ಮ ಕಣ್ಣಿಗೆ ಕಾಣಲಿದೆ" ಎಂದು ತಿಳಿಸಿದರು. ಮೇಕೆದಾಟು ಯೋಜನೆ ವಿಚಾರವಾಗಿ ಕೇಳಿದಾಗ, "ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

ಕನ್ನಡ ಚಿತ್ರರಂಗದಲ್ಲಿ ಮೀ ಟೂ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಧ್ಯಯನ ಮಾಡಲು ಸಮಿತಿ ರಚನೆಗೆ ಆಗ್ರಹದ ಬಗ್ಗೆ ಕೇಳಿದಾಗ, "ನನಗೆ ಮೀ ಟೂ ವಿಚಾರವಾಗಿ ಹೆಚ್ಚಿನ ಮಾಹಿತಿಯಿಲ್ಲ. ಈ ವಿಚಾರವಾಗಿ ತಿಳಿದು ಮಾತನಾಡುತ್ತೇನೆ" ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments