ಬಿಜೆಪಿಯವರು ಬೆಂಗಳೂರಿಗಾಗಿ ಏನು ಕಡಿದು ಕಟ್ಟೆ ಹಾಕಿದ್ದಾರೆ: ಡಿಕೆ ಶಿವಕುಮಾರ್

Krishnaveni K
ಗುರುವಾರ, 5 ಸೆಪ್ಟಂಬರ್ 2024 (16:07 IST)
ಬೆಂಗಳೂರು: ರಾಜ್ಯರಾಜಧಾನಿ ಗಾರ್ಬೇಜ್ ಸಿಟಿಯಾಗುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿ ಕೇಳಿದಾಗ ಬಿಜೆಪಿಯವರು ಏನು ಕೊಡುಗೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
 
"ಬಿಜೆಪಿ ಇರುವುದೇ ಟೀಕೆ ಮಾಡಲು, ರಾಜಕಾರಣ ಮಾಡಲು. ಈ ಸಮಸ್ಯೆಗೆ ಪರಿಹಾರ ನೀಡಲು ನಾನು ಪ್ರಯತ್ನವಾದರೂ ಮಾಡುತ್ತಿದ್ದೇನೆ. ಈ ಬಗ್ಗೆ ಅಧ್ಯಯನ ಮಾಡಲು, ಚೆನ್ನೈ, ಹೈದರಬಾದ್, ಮುಂಬೈಗೆ ಭೇಟಿ ನೀಡಿದ್ದೆ. ನಗರದ ಹೊರಗೆ ಕಸ ವಿಲೇವಾರಿಗೆ ನಾಲ್ಕು ಕಡೆಗಳಲ್ಲಿ ಜಾಗ ಹುಡುಕಲಾಗಿದೆ. ಹೀಗೆ ನನ್ನದೇ ಆದ ಪ್ರಯತ್ನ ಮಾಡುತ್ತಿದ್ದೇನೆ. ಅವರು ಏನು ಮಾಡಿದ್ದಾರೆ?" ಎಂದು ಪ್ರಶ್ನಿಸಿದರು.

ಡಿಸಿಎಂ ಕೇವಲ ಪ್ರಚಾರಕ್ಕೆ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಿದ್ದು, ಕೆಲಸ ಆಗುತ್ತಿಲ್ಲ ಎಂಬ ಟೀಕೆ ಬಗ್ಗೆ ಕೇಳಿದಾಗ, "ನಾನು ಟೀಕೆಗಳಿಗೆ ಉತ್ತರ ಕೊಡುವುದಿಲ್ಲ. ನಮ್ಮ ಕೆಲಸಗಳೇ ನಿಮ್ಮ ಕಣ್ಣಿಗೆ ಕಾಣಲಿದೆ" ಎಂದು ತಿಳಿಸಿದರು. ಮೇಕೆದಾಟು ಯೋಜನೆ ವಿಚಾರವಾಗಿ ಕೇಳಿದಾಗ, "ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

ಕನ್ನಡ ಚಿತ್ರರಂಗದಲ್ಲಿ ಮೀ ಟೂ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಅಧ್ಯಯನ ಮಾಡಲು ಸಮಿತಿ ರಚನೆಗೆ ಆಗ್ರಹದ ಬಗ್ಗೆ ಕೇಳಿದಾಗ, "ನನಗೆ ಮೀ ಟೂ ವಿಚಾರವಾಗಿ ಹೆಚ್ಚಿನ ಮಾಹಿತಿಯಿಲ್ಲ. ಈ ವಿಚಾರವಾಗಿ ತಿಳಿದು ಮಾತನಾಡುತ್ತೇನೆ" ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments