ಕುಮಾರಸ್ವಾಮಿ ಏನು ಮಿಲಿಟ್ರಿ ಕರ್ಕೊಂಡು ಬರ್ತಾವ್ರಾ: ಡಿಕೆ ಶಿವಕುಮಾರ್ ವ್ಯಂಗ್ಯ

Krishnaveni K
ಶನಿವಾರ, 20 ಜುಲೈ 2024 (13:45 IST)
ಬೆಂಗಳೂರು: ಶಿರೂರಿನಲ್ಲಿ ಇತ್ತೀಚೆಗೆ ನಡೆದ ಭೂಕುಸಿತ ದುರಂತ ಸ್ಥಳಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯ ಭಾರತ್ ಝೋಡೋ ಭವನದಲ್ಲಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಶಿರೂರಿಗೆ ಕುಮಾರಸ್ವಾಮಿ ಭೇಟಿ ನೀಡಿದ ಬಗ್ಗೆ ಕೇಳಿದಾಗ ವ್ಯಂಗ್ಯವಾಗಿ ಮಾತನಾಡಿದ್ದಾರೆ.

‘ಅವರೇನಾದರೂ ಮಿಲಿಟ್ರಿ ಕರ್ಕೊಂಡು ಬಂದು ಏನಾದರೂ ತೆರವು ಮಾಡಿದ್ರೆ ಕಾರ್ಯಾಚರಣೆ ಮಾಡಿದ್ರು ಎನ್ನಬಹುದಿತ್ತು. ಸುಮ್ನೇ ಬಂದು ವಿಸಿಟ್ ಮಾಡಿದ್ರೆ ಏನು ಪ್ರಯೋಜನ. ಘಟನೆ ನಡೆದ ಒಂದೇ ಗಂಟೆಯಲ್ಲಿ ನಮ್ಮ ಇಬ್ಬರು ಸಚಿವರನ್ನು ಅಲ್ಲಿಗೆ ಓಡಿಸಿದ್ದೆವು. ಅವರು ತಕ್ಷಣ ಏನು ಮಾಡಬೇಕೋ ಅದನ್ನು ಮಾಡಿದ್ದಾರೆ. ನಮ್ಮ ಸರ್ಕಾರ ಏನು ಮಾಆಡಬೇಕೋ ಮಾಡಿದ್ದಾರೆ. ಇನ್ನೇನು ಮಿಲಿಟ್ರಿಯವರನ್ನು ಕರೆಸಿ ಏನಾದ್ರೂ ಮಾಡಿದ್ರೆ ಕೇಂದ್ರದಿಂದ ಏನಾದರೂ ಸಹಾಯ ಮಾಡಿದ್ದಾರೆ ಎನ್ನಬಹುದಿತ್ತು. ಯಾರು ಬೇಕಾದರೂ ಹೋಗಲಿ, ನಾನ್ಯಾಕೆ ಸ್ಟಾಪ್ ಮಾಡ್ಲಿ? ಅವರ ಪಾರ್ಟಿ ಸಂಘಟನೆಗೆ ಅವರು ಹೋಗ್ತಾರಪ್ಪ, ಹೋಗಲಿ’ ಎಂದಿದ್ದಾರೆ.

ಇನ್ನು ಎಲ್ಲಾ ನಿಗಮದಲ್ಲಿ ನಡೆಯುತ್ತಿರುವ ಅವ್ಯವಹಾರ ತಡೆ ಪ್ರಶ್ನೆಗೆ ಉತ್ತರಿಸಿದ ಅವರು ಎಲ್ಲಾ ನಿಗಮದ ಅಧ್ಯಕ್ಷರಿಗೂ ಎಚ್ಚರಿಕೆ ನೀಡಿದ್ದೇವೆ. ಕೆಲವು ಅಧಿಕಾರಿಗಳು ಖದೀಮರಿದ್ದಾರೆ. ಕೆಲವರು ಅಲ್ಲಿ ತಿಂದು ಇಲ್ಲೂ ಇರ್ತಾರೆ. ಕ್ಲರ್ಕ್ ಗಳಿಗೆ ಎಂಡಿ, ಸೂಪರ್ ವೈಸರ್ ಅಂತ ಪೋಸ್ಟ್ ಕೊಟ್ಟಿದ್ದಾರೆ. ಅದನ್ನೆಲ್ಲಾ ನಾವು ಸರಿಮಾಡ್ತೀವಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments