Webdunia - Bharat's app for daily news and videos

Install App

ಜನರತ್ತ ಕೈ ಬೀಸುತ್ತಾ ಬುಲೆಟ್ ಬೈಕ್ ನಲ್ಲಿ ಮಾಗಡಿ ಶಾಸಕ ಬಾಲಕೃಷ್ಣ ಹಿಂದೆ ಡಿಕೆ ಶಿವಕುಮಾರ್ ಬೈಕ್ ರೈಡ್

Krishnaveni K
ಶುಕ್ರವಾರ, 2 ಆಗಸ್ಟ್ 2024 (14:19 IST)
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಕೌಂಟರ್ ಕೊಡಲು ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ಜನಾಂದೋಲನ ಸಭೆಗೆ ಮುನ್ನ ಇಂದು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬೈಕ್ ರೈಡ್ ನಡೆಸಿದರು. ಈ ವೇಳೆ ಡಿಕೆ ಶಿವಕುಮಾರ್ ಮಾಗಡಿ ಶಾಸಕ ಬಾಲಕೃಷ್ಣ ಜೊತೆ ಬೈಕ್ ರೈಡ್ ಮಾಡಿ ಗಮನ ಸೆಳೆದರು.

ರಾಜ್ಯ ಬಿಜೆಪಿ ನಾಯಕರು ಮುಡಾ ಹಗರಣ ವಿಚಾರವಾಗಿ ಮೈಸೂರಿಗೆ ಪಾದ ಯಾತ್ರೆ ನಡೆಸಲಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಜನಾಂದೋಲನ ಸಭೆ ನಡೆಸುತ್ತಿದೆ. ಇದರ ಪೂರ್ವಭಾವಿಯಾಗಿ ಇಂದು ಬಿಡದಿಯಿಂದ ಬೈಕ್ ರಾಲಿ ನಡೆಯಿತು.

ಈ ವೇಳೆ ಮಾಗಡಿ ಶಾಸಕ ಬಾಲಕೃಷ್ಣ ಬುಲೆಟ್ ಬೈಕ್ ಓಡಿಸಿದರೆ ಅವರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೂತು ಸವಾರಿ ಮಾಡಿದರು. ದಾರಿಯುದ್ಧಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳತ್ತ ಕೈ ಬೀಸುತ್ತಾ ಸಾಗಿದ ಡಿಕೆಶಿ ಬೈಕ್ ರೈಡ್ ಎಂಜಾಯ್ ಮಾಡುತ್ತಿದ್ದುದು ಕಂಡುಬಂತು.

ಆಗಸ್ಟ್ 2 ರಿಂದ 9 ರವರೆಗೆ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಮೈಸೂರಿನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಜನಾಂದೋಲನ ಸಭೆ ನಡೆಸಲಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರೂ ಭಾಗಿಯಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments