Webdunia - Bharat's app for daily news and videos

Install App

ಕನ್ನಡದ ಶಾಲು ಹೊದ್ದುಕೊಂಡು ಬಂದು ಮತದಾನ ಮಾಡಿದ ಡಿಕೆ ಶಿವಕುಮಾರ್

Krishnaveni K
ಶುಕ್ರವಾರ, 26 ಏಪ್ರಿಲ್ 2024 (15:25 IST)
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು ಈಗಾಗಲೇ ಹಲವು ರಾಜಕೀಯ ನಾಯಕರು ತಮ್ಮ ಹಕ್ಕು ಚಲಾಯಿಸಿದ್ದಾರೆ.
 

ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ತವರು ಸಾತನೂರಿನಲ್ಲಿ ಮತ ಚಲಾವಣೆ ಮಾಡಿದ್ದಾರೆ. ಈ ವೇಳೆ ಅವರು ಕನ್ನಡದ ಶಾಲು ಹೊದ್ದು ಬಂದಿದ್ದು ವಿಶೇಷವಾಗಿತ್ತು. ಡಿಕೆ ಶಿವಕುಮಾರ್ ಜೊತೆಗೆ ಅವರ ಸಹೋದರ ಡಿಕೆ ಸುರೇಶ್ ಕೂಡಾ ಇದ್ದರು. ಅವರೂ ಕನ್ನಡದ ಶಾಲು ಧರಿಸಿ ಬಂದಿದ್ದರು. ಮತ ಚಲಾವಣೆ ಬಳಿಕ ಡಿಕೆ ಬ್ರದರ್ಸ್ ಫೋಟೋಗೆ ಪೋಸ್ ನೀಡಿದ್ದಾರೆ.

ಡಿಕೆ ಸುರೇಶ್ ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ವಿರುದ್ಧ ಸ್ಪರ್ಧೆ ನಡೆಸುತ್ತಿದ್ದಾರೆ. ಈ ಲೋಕಸಭೆ ಕಣದ ಫಲಿತಾಂಶದ ಮೇಲೆ ಎಲ್ಲರ ಕುತೂಹಲವಿದೆ. ಹಾಲಿ ಸಂಸದರಾಗಿರುವ ಡಿಕೆ ಸುರೇಶ್ ಗೆ ಈ ಬಾರಿ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಮಣ್ಣು ಮುಕ್ಕಿಸುವ ವಿಶ್ವಾಸದಲ್ಲಿದ್ದಾರೆ.

ಇಂದು ಮತದಾನ ಮಾಡಿದ ಪ್ರಮುಖರಲ್ಲಿ ಸಿಎಂ ಸಿದ್ದರಾಮಯ್ಯ, ಜಮೀರ್ ಅಹಮ್ಮದ್ ಸೇರಿದಂತೆ ಅನೇಕ ಪ್ರಮುಖರು ಸೇರಿದ್ದಾರೆ. ಕರ್ನಾಟಕದಲ್ಲಿ ಇದುವರೆಗೆ 38.23 % ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ವೋಟಿಂಗ್ ನಡೆದಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments