ಬರೆದಿಟ್ಕೊಳ್ಳಿ, ಮುಂದಿನ ಸಲವೂ ನಾವೇ ಅಧಿಕಾರಕ್ಕೆ ಬರುವುದು: ಡಿಕೆ ಶಿವಕುಮಾರ್

Krishnaveni K
ಶನಿವಾರ, 27 ಜುಲೈ 2024 (13:48 IST)
ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿಕೊಂಡ ಕಾರಣಕ್ಕೆ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೇಕಾದರೆ ಬರೆದಿಟ್ಕೊಳ್ಳಿ, ಮುಂದಿನ ಸಲವೂ ನಾವೇ ಅಧಿಕಾರಕ್ಕೆ ಬರುವುದು ಎಂದಿದ್ದಾರೆ.

ರಾಮನಗರ ಹೆಸರು ಬದಲಾವಣೆ ಮಾಡಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಆದರೆ ಇದನ್ನು ವಿರೋಧಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಮುಂದಿನ ಸಲ ನಾವು ಅಧಿಕಾರಕ್ಕೆ ಬಂದಾಗ ಮತ್ತೆ ರಾಮನಗರ ಎಂದು ಹೆಸರು ಬದಲಾವಣೆ ಮಾಡುತ್ತೇವೆ ಎಂದಿದ್ದರು.

ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಕೆಶಿ ಮುಂದಿನ ಸಲವೂ ನಾವೇ ಅಧಿಕಾರಕ್ಕೆ ಬರುವುದು ಎಂದಿದ್ದಾರೆ. ರಾಮನಗರ ಹೆಸರು ಬದಲಾವಣೆ ಮಾಡಿದವರು ಸರ್ವನಾಶವಾಗುತ್ತಾರೆ ಎಂದು ಕುಮಾರಸ್ವಾಮಿ ಶಾಪ ಹಾಕಿದ್ದರು. ಈಗ ಅದಕ್ಕೆ ತಿರುಗೇಟು ನೀಡಿರುವ ಡಿಕೆಶಿ ಎಷ್ಟು ಒಳ್ಳೆಯದು ಮಾಡಿದರೂ ನನಗೆ ಕೆಲವರು ಶಾಪ ಹಾಕುತ್ತಾರೆ ಎಂದಿದ್ದಾರೆ.

‘ಕೆಂಗಲ್ ಹನುಮಂತಯ್ಯ ಬೆಂಗಳೂರಿಗೆ ಬಂದು ವಿಧಾನ ಸೌಧ ಕಟ್ಟಿದ್ರು. ದೇವೇಗೌಡರು, ಕುಮಾರಸ್ವಾಮಿ ಬೆಂಗಳೂರಿಗೆ ಬಂದರು. ನಮ್ಮ ಹಿರಿಯರು ಇಟ್ಟಿದ್ದ ಹೆಸರು ಇರಬೇಕು. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಹೆಸರು ಬದಲಾವಣೆ ಮಾಡಲಾಗಿದೆ. 2028 ಕ್ಕೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೆ, ಬರೆದಿಟ್ಕೊಳ್ಳಿ’ ಎಂದು ಡಿಕೆಶಿ ಸವಾಲು ಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಡಿಕೆಶಿ ಮನೆಗೆ ಬೊಕ್ಕೆ ಹಿಡಿದು ಬರುತ್ತಿರುವ ಬೆಂಬಲಿಗರು, ಮತ್ತೊಂದೆಡೆ ಬಿಕೋ ಎನ್ನುತ್ತಿರುವ ವಿಧಾನಸಭೆಯ 323 ಕೊಠಡಿ

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments