Webdunia - Bharat's app for daily news and videos

Install App

ಹೌದಪ್ಪಾ ನನಗೆ ಮದ ಜಾಸ್ತಿ, ಛತ್ರಿ ಅಂತ ಎಲ್ರೀ ಹೇಳಿದ್ದೀನಿ: ಡಿಕೆ ಶಿವಕುಮಾರ್

Krishnaveni K
ಗುರುವಾರ, 20 ಮಾರ್ಚ್ 2025 (12:23 IST)
ಬೆಂಗಳೂರು: ಮಂಡ್ಯ ಜನರನ್ನು ಡಿಸಿಎಂ ಡಿಕೆ ಶಿವಕುಮಾರ್ ಛತ್ರಿಗಳು ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ನನಗೆ ಮದ ಜಾಸ್ತಿ ಎಂದಿದ್ದು, ಛತ್ರಿ ಅಂತ ಎಲ್ರೀ ಹೇಳಿದ್ದೀನಿ ಎಂದು ಪ್ರಶ್ನಿಸಿದ್ದಾರೆ.

ಡಿಕೆ ಶಿವಕುಮಾರ್ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ನಿನ್ನೆ ರಾಹುಲ್ ಗಾಂಧಿಯವರನ್ನು ಭೇಟಿಯಾದ ವಿಚಾರದ ಬಗ್ಗೆ ಮಾತನಾಡಿದರು. ಬೆಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣದ ಭೂಮಿ ಪೂಜೆಗೆ ಕರೆಯುವುದಕ್ಕೆ ಅವರನ್ನು ಭೇಟಿ ಮಾಡಿದ್ದೆ ಎಂದಿದ್ದಾರೆ.

ಬಳಿಕ ಮಾಧ್ಯಮಗಳು ಮಂಡ್ಯದವರನ್ನು ಛತ್ರಿ ಎಂದು ಕರೆದಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ. ‘ಎಲ್ರೀ ನಾನು ಛತ್ರಿ ಎಂದು ಕರೆದಿದ್ದು, ಅವನೇನು ನೋಡಿದ್ನಾ? ಹೌದಪ್ಪ ನನಗೆ ಮದ ಜಾಸ್ತಿ ಏನಿವಾಗ?

ನನ್ನಿಷ್ಟ ನಾನು ನನ್ನ ಆತ್ಮೀಯರನ್ನು ಹೇಗಾದ್ರೂ ಕರೆಯುತ್ತೇನೆ. ಕಳ್ ನನ್ಮಗ ಅಂತೀನಿ. ಅದೆಲ್ಲಾ ಪ್ರೀತಿಯಿಂದ ನಮ್ಮ ಆಪ್ತರನ್ನು ಕರೆಯೋದು. ಛತ್ರಿಗಳು ಎಂದು ನಾನು ಕರೆದಿದ್ದೇನೆ ಎನ್ನುವುದು ಸುಳ್ಳು’ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments