Webdunia - Bharat's app for daily news and videos

Install App

DK Shivakumar: ಹೊಟ್ಟೆ ಬಟ್ಟೆಗೆ ನಮ್ಮತ್ರ ಬರ್ತಾರೆ ಎಂದಿದ್ದ ಡಿಕೆ ಶಿವಕುಮಾರ್: ಯಾವಾಗ ಬಂದಿದ್ವಿ ಹೇಳಿ ಎಂದ ಮಂಗಳೂರಿಗರು

Krishnaveni K
ಶನಿವಾರ, 31 ಮೇ 2025 (11:18 IST)
ಮಂಗಳೂರು: ಮಂಗಳೂರಿಗರು ಹೊಟ್ಟೆ ಬಟ್ಟೆಗೆ ನಮ್ಮಬಳಿ ಬರ್ತಾರೆ, ವೋಟ್ ಮಾತ್ರ ಬೇರೆಯವರಿಗೆ ಹಾಕ್ತಾರೆ ಎಂದು ಹಗುರವಾಗಿ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜನ ಸಿಡಿದೆದ್ದಿದ್ದಾರೆ. ನಿಮ್ಮ ಮುಂದೆ ಯಾವಾಗ ಬಂದಿದ್ವಿ ಹೇಳಿ ಎಂದಿದ್ದಾರೆ.

ಮಂಗಳೂರಿನವರು ಗ್ಯಾರಂಟಿ ಬೇಡ ಎಂದ್ರು. ಆದರೆ ನಂತರ ಅವರೇ ಮೊದಲು ಕ್ಯೂನಲ್ಲಿ ನಿಂತಿರುತ್ತಾರೆ. ಕನಕಪುರದವರಿಗಿಂತ ಅವರೇ ಶೇ.80 ರಷ್ಟು ಅರ್ಜಿ ಹಾಕುತ್ತಾರೆ. ಮಂಗಳೂರಿಗರಿಗೆ ಹೊಟ್ಟೆಬಟ್ಟೆಗೆ ಕಾಂಗ್ರೆಸ್ ನವರು ಬೇಕು. ವೋಟ್ ಹಾಕೋಕೆ ಬೇರೆಯವರು ಬೇಕು ಎಂದು ಹಗುರವಾಗಿ ಮಾತನಾಡಿದ್ದರು.

ಇದು ಮಂಗಳೂರಿಗರನ್ನು ರೊಚ್ಚಿಗೆಬ್ಬಿಸಿದೆ.  ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಕಾಮೆಂಟ್ ಗಳು ಬರುತ್ತಿವೆ. ಡಿಕೆಶಿಯವರೇ ನಾವು ಮಂಗಳೂರಿನವರು ಸ್ವಾಭಿಮಾನಿಗಳು. ಹೊಟ್ಟೆ ಬಟ್ಟೆಗೆ ನಿಮ್ಮ ಮುಂದೆ ಕೈ ಕಟ್ಟಿ ನಿಲ್ಲುವ ಪರಿಸ್ಥಿತಿ ನಮಗಿಲ್ಲ. ನಾವು ಯಾವಾಗ ಬಂದಿದ್ದೇವೆ ಹೇಳಿ ಎಂದಿದ್ದಾರೆ.

ಇನ್ನು ಮಂಗಳೂರು ಶಾಸಕ ಭರತ್ ಶೆಟ್ಟಿ ಕೂಡಾ ಕಿಡಿ ಕಾರಿದ್ದು, ರಾಜ್ಯದ ಆದಾಯಕ್ಕೆ ಮಂಗಳೂರಿನ ಕೊಡುಗೆ ಹೆಚ್ಚಿದೆ. ಇದನ್ನೇ ಬೇರೆ ಜಿಲ್ಲೆಗಳ ಅಭಿವೃದ್ಧಿಗೂ ಬಳಸುತ್ತೀರಿ. ಅಷ್ಟಕ್ಕೂ ನೀವು ನಿಮ್ಮ ಸ್ವಂತ ಜೇಬಿನಿಂದ ಕೊಡುತ್ತಿಲ್ಲ. ರಾಜ್ಯದ ಆದಾಯದಲ್ಲಿ ನಮಗೂ ಪಾಲಿದೆ. ಮಾತನಾಡುವಾಗ ನೋಡಿಕೊಂಡು ಮಾತನಾಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments