Webdunia - Bharat's app for daily news and videos

Install App

ತಾಕತ್ತಿನ ಬಗ್ಗೆ ಪ್ರಶ್ನಿಸಿದ ಮುನಿರತ್ನಗೆ ನೀ ರೇಪಿಸ್ಟ್ ಎಂದು ಡಿಕೆ ಶಿವಕುಮಾರ್ ಕೌಂಟರ್: ಸದನದಲ್ಲಿ ಗದ್ದಲ

Krishnaveni K
ಗುರುವಾರ, 26 ಮಾರ್ಚ್ 2026 (13:54 IST)
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಇಂದು ಬಿಜೆಪಿ ಶಾಸಕ ಮುನಿರತ್ನ ನಿಮಗೆ ತಾಕತ್ತಿದ್ದರೆ ಎಂದು ಹೇಳಿದ್ದಕ್ಕೆ ಸಿಟ್ಟಾದ ಡಿಸಿಎಂ ಡಿಕೆ ಶಿವಕುಮಾರ್ ನೀನು ರೇಪಿಸ್ಟ್ ಎಂದು ಕೌಂಟರ್ ಕೊಟ್ಟಿದ್ದು ಕೋಲಾಹಲವೇ ಉಂಟಾಗಿದೆ.

ಇಂದು ಸದನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬೆಂಗಳೂರು ಅಭಿವೃದ್ಧಿ ಬಗ್ಗೆ ಮುನಿರತ್ನ ಮಾತನಾಡುತ್ತಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ಎಂದು ಹೇಳಲು ಹೊರಟರು. ಇದು ಡಿಕೆಶಿ ಸಿಟ್ಟಿಗೆ ಕಾರಣವಾಯ್ತು.

ನನ್ನ ತಾಕತ್ತು, ಧಮ್ ಬಗ್ಗೆಯೇ ಮಾತನಾಡುತ್ತಾನೆ. ನೀನು ರೇಪಿಸ್ಟ್, ನಿನ್ನ ಕೇಸ್ ಗಳ ಹಿಸ್ಟರಿ ಹೇಳಲು ಹೊರಟರೆ ಇಲ್ಲಿ ಸಾಕಾಗಲ್ಲ ಎಂದು ಕೌಂಟರ್ ಕೊಟ್ಟರು. ಇದರಿಂದ ಈ ವಾಗ್ವಾದ ವೈಯಕ್ತಿಕ ಮಟ್ಟಕ್ಕೆ ಇಳಿಯಿತು. ಈ ವೇಳೆ ಮುನಿರತ್ನ ಪರ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿದರೆ ಇತ್ತ ಕಾಂಗ್ರೆಸ್ ಶಾಸಕರು ಡಿಕೆಶಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸದನದ ಬಾವಿಗಳಿದು ಘೋಷಣೆಗಳನ್ನು ಕೂಗಿದರು.

ಇದರಿಂದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಸಿಟ್ಟಿಗೆದ್ದ ಸ್ಪೀಕರ್ ಯುಟಿ ಖಾದರ್ ಆಡಳಿತ ಪಕ್ಷದ ಸದಸ್ಯರ ಮೇಲೆ ಕೂಗಾಡಿದರು. ಎಷ್ಟು ಬೊಬ್ಬೆ ಹೊಡೆಯುತ್ತೀರೋ ಹೊಡೆಯಿರಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments