Webdunia - Bharat's app for daily news and videos

Install App

ರಾಜಕೀಯದಲ್ಲಿ ಗೆಲುವಿಗಾಗಿ ಪ್ರತ್ಯಂಗಿರಾ ದೇವಿ ಮೊರೆ ಹೋದ ಡಿಕೆ ಶಿವಕುಮಾರ್: ಇಲ್ಲಿನ ವಿಶೇಷತೆಯೇನು

Krishnaveni K
ಗುರುವಾರ, 9 ಜನವರಿ 2025 (14:23 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಒಂದೆಡೆ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದ್ದರೆ ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಕುಂಭಕೋಣಂನ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದಿದ್ದಾರೆ. ಈ ಪವರ್ ಫುಲ್ ದೇವಿಯ ವಿಶೇಷತೆಯೇನು ನೋಡಿ.

ರಾಜ್ಯ ರಾಜಕೀಯದಲ್ಲಿ ಈಗ ಡಿನ್ನರ್ ಪಾರ್ಟಿ ಚರ್ಚೆಗಳು ಜೋರಾಗುತ್ತಿದ್ದರೆ ಇತ್ತ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಕುಟುಂಬ ಸಮೇತ ಇಂದು ಕುಂಭಕೋಣಂನ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕುಂಭಕೋಣಂನ ಅಯ್ಯಾವುಡಿಯಲ್ಲಿರುವ ಪ್ರತ್ಯಂಗಿರಾ ದೇವಿ ದೇವಾಲಯ ಅತ್ಯಂತ ಪ್ರಾಚೀನಾ ದೇವಾಲಯವಾಗಿದೆ. ಉಗ್ರಸ್ವರೂಪಿಣಿ ದೇವಿಯ ರೂಪವಾಗಿದ್ದು, ಇಲ್ಲಿ ಪೂಜೆ ಸಲ್ಲಿಸಿದರೆ ಶತ್ರು ಸಂಹಾರವಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಈಗ ಡಿಕೆಶಿಗೆ ರಾಜಕೀಯ ವಲಯದಲ್ಲಿ ಶತ್ರುಗಳು ಯಾರು, ಯಾವುದರ ಸಂಹಾರಕ್ಕಾಗಿ ಅವರು ಇಲ್ಲಿ ಬಂದು ಪೂಜೆ ಸಲ್ಲಿಸಿದ್ದಾರೆ ಎಂಬ ಪ್ರಶ್ನೆ ಮೂಡಿದೆ.

ಪ್ರತ್ಯಂಗಿರಾ ದೇವಿಗೆ ಹೋಮ, ಪೂಜೆ ಮಾಡುವುದು ಅತ್ಯಂತ ವಿಶೇಷವಾಗಿದೆ. ಇದರಿಂದ ನಕಾರಾತ್ಮಕ ಶಕ್ತಿಗಳು, ನಮ್ಮ ಮೇಲಿರುವ ಕೆಟ್ಟ ದೃಷ್ಟಿ, ದುಷ್ಟ ಶಕ್ತಿಗಳು ನಮಗೆ ತೊಂದರೆ ನೀಡದಂತೆ ಕಾಪಾಡಿಕೊಳ್ಳಲು ದೇವಿ ಅನುಗ್ರಹಿಸುತ್ತಾಳೆ ಎಂಬ ನಂಬಿಕೆಯಿದೆ. ಸಾಮಾನ್ಯವಾಗಿ ರಾಜಕಾರಣಿಗಳು ಉನ್ನತ ಹುದ್ದೆಗೇರುವ ಮಹತ್ವಾಕಾಂಕ್ಷೆಯಿಂದ ಪ್ರತ್ಯಂಗಿರಾ ದೇವಿ ಪೂಜೆ ಮಾಡುತ್ತಾರೆ. ಇದೀಗ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಡಿಕೆಶಿ ಪೂಜೆ ನಡೆಸಿರುವುದು  ವಿಶೇಷ ಮಹತ್ವ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments