ರಾಜಕೀಯದಲ್ಲಿ ಗೆಲುವಿಗಾಗಿ ಪ್ರತ್ಯಂಗಿರಾ ದೇವಿ ಮೊರೆ ಹೋದ ಡಿಕೆ ಶಿವಕುಮಾರ್: ಇಲ್ಲಿನ ವಿಶೇಷತೆಯೇನು

Krishnaveni K
ಗುರುವಾರ, 9 ಜನವರಿ 2025 (14:23 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಒಂದೆಡೆ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದ್ದರೆ ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಕುಂಭಕೋಣಂನ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದಿದ್ದಾರೆ. ಈ ಪವರ್ ಫುಲ್ ದೇವಿಯ ವಿಶೇಷತೆಯೇನು ನೋಡಿ.

ರಾಜ್ಯ ರಾಜಕೀಯದಲ್ಲಿ ಈಗ ಡಿನ್ನರ್ ಪಾರ್ಟಿ ಚರ್ಚೆಗಳು ಜೋರಾಗುತ್ತಿದ್ದರೆ ಇತ್ತ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಕುಟುಂಬ ಸಮೇತ ಇಂದು ಕುಂಭಕೋಣಂನ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕುಂಭಕೋಣಂನ ಅಯ್ಯಾವುಡಿಯಲ್ಲಿರುವ ಪ್ರತ್ಯಂಗಿರಾ ದೇವಿ ದೇವಾಲಯ ಅತ್ಯಂತ ಪ್ರಾಚೀನಾ ದೇವಾಲಯವಾಗಿದೆ. ಉಗ್ರಸ್ವರೂಪಿಣಿ ದೇವಿಯ ರೂಪವಾಗಿದ್ದು, ಇಲ್ಲಿ ಪೂಜೆ ಸಲ್ಲಿಸಿದರೆ ಶತ್ರು ಸಂಹಾರವಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಈಗ ಡಿಕೆಶಿಗೆ ರಾಜಕೀಯ ವಲಯದಲ್ಲಿ ಶತ್ರುಗಳು ಯಾರು, ಯಾವುದರ ಸಂಹಾರಕ್ಕಾಗಿ ಅವರು ಇಲ್ಲಿ ಬಂದು ಪೂಜೆ ಸಲ್ಲಿಸಿದ್ದಾರೆ ಎಂಬ ಪ್ರಶ್ನೆ ಮೂಡಿದೆ.

ಪ್ರತ್ಯಂಗಿರಾ ದೇವಿಗೆ ಹೋಮ, ಪೂಜೆ ಮಾಡುವುದು ಅತ್ಯಂತ ವಿಶೇಷವಾಗಿದೆ. ಇದರಿಂದ ನಕಾರಾತ್ಮಕ ಶಕ್ತಿಗಳು, ನಮ್ಮ ಮೇಲಿರುವ ಕೆಟ್ಟ ದೃಷ್ಟಿ, ದುಷ್ಟ ಶಕ್ತಿಗಳು ನಮಗೆ ತೊಂದರೆ ನೀಡದಂತೆ ಕಾಪಾಡಿಕೊಳ್ಳಲು ದೇವಿ ಅನುಗ್ರಹಿಸುತ್ತಾಳೆ ಎಂಬ ನಂಬಿಕೆಯಿದೆ. ಸಾಮಾನ್ಯವಾಗಿ ರಾಜಕಾರಣಿಗಳು ಉನ್ನತ ಹುದ್ದೆಗೇರುವ ಮಹತ್ವಾಕಾಂಕ್ಷೆಯಿಂದ ಪ್ರತ್ಯಂಗಿರಾ ದೇವಿ ಪೂಜೆ ಮಾಡುತ್ತಾರೆ. ಇದೀಗ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಡಿಕೆಶಿ ಪೂಜೆ ನಡೆಸಿರುವುದು  ವಿಶೇಷ ಮಹತ್ವ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments