ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Krishnaveni K
ಶನಿವಾರ, 22 ನವೆಂಬರ್ 2025 (09:31 IST)
Photo Credit: X
ಬೆಂಗಳೂರು: ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್ ಎಂಬ ಅನುಮಾನ ಮೂಡಿದೆ. ರಾತ್ರೋ ರಾತ್ರಿ ಡಿಕೆಶಿ ಮಾಡಿದ್ದೇನು ಇಲ್ಲಿದೆ  ವಿವರ.

ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಪಾಳಯದಲ್ಲಿ ಭಾರೀ ಚಟುವಟಿಕೆ ಕಂಡುಬರುತ್ತಿದೆ. ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು ಸಖತ್ ಆಕ್ಟಿವ್ ಆಗಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬಣವೂ ಎಚ್ಚರಿಕೆಯಿಂದಿದೆ.

ನಿನ್ನೆ ರಾತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಲ್ಲಿ ಜೇನುಕಲ್ ಸಿದ್ಧೇಶ್ವರ ಸ್ವಾಮಿಗಳ ಪಾದುಕೆಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಕೂಡಾ ಮುಖ್ಯಮಂತ್ರಿಯಾಗುವ ಮುನ್ನ ಈ ಪಾದುಕೆಗಳಿಗೆ ಪೂಜೆ ಸಲ್ಲಿಸಿದ್ದರು. ಹೀಗಾಗಿ ಡಿಕೆಶಿ ರಾತ್ರೋ ರಾತ್ರಿ ಸಿದ್ಧೇಶ್ವರ ಸ್ವಾಮಿಗಳ ಪಾದುಕೆಗಳಿಗೆ ಪೂಜೆ ಸಲ್ಲಿಸಿರುವುದು ನೋಡಿದರೆ ಸಿಎಂ ಆಗಲು ದೇವರ ಮೊರೆ ಹೋಗಿದ್ದಾರಾ ಎನ್ನುವ ಅನುಮಾನ ಮೂಡಿದೆ.

ಆದರೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಡಿಕೆ ಶಿವಕುಮಾರ್, ನನ್ನದು ಪ್ರತ್ಯೇಕ ಬಣವಿಲ್ಲ. ಹೈಕಮಾಂಡ್ ಸಂಪುಟ ವಿಸ್ತರಣೆ ಮಾಡಲು ಅಸ್ತು ಎಂದಿದೆ. ಇದಕ್ಕಾಗಿಯೇ ಕೆಲವು ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ತಮಗೆ ಸಚಿವ ಸ್ಥಾನ ಕೊಡಿ ಎಂದು ಕೇಳುತ್ತಿದ್ದಾರೆ ಅಷ್ಟೇ ಎಂದಿದ್ದಾರೆ. ಆದರೆ ಕಾಂಗ್ರೆಸ್ ನಾಯಕರ ಮಾಧ್ಯಮ ಹೇಳಿಕೆಗಳಿಗೂ ಅವರ ನಡತೆಗೂ ಅಜಗಜಾಂತರ ವ್ಯತ್ಯಾಸವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments