Select Your Language

Notifications

webdunia
webdunia
webdunia
webdunia

ಸಿಎಂ ಆದ ಬೆನ್ನಲ್ಲೇ ಡಿಕೆ ಶಿವಕುಮಾರ್ ಮೇಲೆ ಬಂತೊಂದು ಅಪವಾದ: ಅದಕ್ಕೆ ಅವರು ಹೇಳಿದ್ದೇನು

DK Shivakumar
ಬೆಂಗಳೂರು: ಸಿಎಂ ಆದ ಬೆನ್ನಲ್ಲೇ ಡಿಕೆ ಶಿವಕುಮಾರ್ ಮೇಲೆ ಇದೊಂದು ಅಪವಾದ ಬಂದಿದ್ದು ಅದಕ್ಕೆ ಅವರ ಪ್ರತಿಕ್ರಿಯೆ ಏನು ಗೊತ್ತಾ?

ಜೂನ್ 3 ರಂದು ಡಿಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರ ಜೊತೆಗೆ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಈ ಪೈಕಿ ಯಾರೂ ಮಹಿಳಾ ಶಾಸಕರು ಇರಲಿಲ್ಲ.

ವಿವಿಧ ಸಮುದಾಯದವರಿಗೆ ಮತ್ತು ಹಿರಿಯರಿಗೆ ಮೊದಲ ಪಟ್ಟಿಯಲ್ಲಿ ಆದ್ಯತೆ ನೀಡಲಾಗಿತ್ತು. ಡಿಕೆಶಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲ ಎಂಬ ಬಗ್ಗೆ ನೆಟ್ಟಿಗರೂ ಪ್ರಶ್ನೆ ಮಾಡಿದ್ದರು. ಅಲ್ಲದೆ ಇದೇ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಟೀಕೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಅವರು ‘ಕಳೆದ ಬಾರಿಯೂ ಮೊದಲ ಪಟ್ಟಿಯಲ್ಲಿ ಮಹಿಳಾ ಶಾಸಕಿಯರು ಇರಲಿಲ್ಲ. ಈ ಬಾರಿಯೂ ಇದೇ ರೀತಿ ಆಗಿದೆ. ಹಾಗಂತ ಇಲ್ಲಿಗೆ ಎಲ್ಲವೂ ಮುಕ್ತಾಯವಾಗಿಲ್ಲ. ನಮ್ಮ ಎರಡನೇ ಪಟ್ಟಿಯಲ್ಲಿ ಮಹಿಳೆಯರು ಇದ್ದೇ ಇರುತ್ತಾರೆ. ಅಲ್ಲಿಯವರೆಗೆ ಸ್ವಲ್ಪ ತಾಳ್ಮೆಯಿಂದ ಕಾಯಬೇಕಷ್ಟೇ’ ಎಂದಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಸಂಪುಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಕಾಶ ನೀಡಲಾಗಿತ್ತು. ಈ ಬಾರಿ ಅವರಿಗೇ ಮತ್ತೆ ಅವಕಾಶ ನೀಡಲಾಗುತ್ತದೆಯೇ ಅಥವಾ ಬೇರೆಯವರಿಗೆ ಅವಕಾಶ ಸಿಗುತ್ತದೆಯೇ ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೇರೆ ಎಲ್ಲದಕ್ಕೂ ನಾನು ಬೇಕು, ಬೆಂಗಳೂರಿನ ಖಾತೆಗೆ ಏಕೆ ಬೇಡ: ಸಿಎಂ ಮುಂದೆಯೇ ಕೂಗಾಡಿದ ರಾಮಲಿಂಗಾ ರೆಡ್ಡಿ