ಸಿಎಂ ಆದ ಬೆನ್ನಲ್ಲೇ ಡಿಕೆ ಶಿವಕುಮಾರ್ ಮೇಲೆ ಬಂತೊಂದು ಅಪವಾದ: ಅದಕ್ಕೆ ಅವರು ಹೇಳಿದ್ದೇನು

ಕೃಷ್ಣವೇಣಿ ಕೆ
ಶುಕ್ರವಾರ, 5 ಜೂನ್ 2026 (09:13 IST)
ಬೆಂಗಳೂರು: ಸಿಎಂ ಆದ ಬೆನ್ನಲ್ಲೇ ಡಿಕೆ ಶಿವಕುಮಾರ್ ಮೇಲೆ ಇದೊಂದು ಅಪವಾದ ಬಂದಿದ್ದು ಅದಕ್ಕೆ ಅವರ ಪ್ರತಿಕ್ರಿಯೆ ಏನು ಗೊತ್ತಾ?

ಜೂನ್ 3 ರಂದು ಡಿಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರ ಜೊತೆಗೆ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಈ ಪೈಕಿ ಯಾರೂ ಮಹಿಳಾ ಶಾಸಕರು ಇರಲಿಲ್ಲ.

ವಿವಿಧ ಸಮುದಾಯದವರಿಗೆ ಮತ್ತು ಹಿರಿಯರಿಗೆ ಮೊದಲ ಪಟ್ಟಿಯಲ್ಲಿ ಆದ್ಯತೆ ನೀಡಲಾಗಿತ್ತು. ಡಿಕೆಶಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲ ಎಂಬ ಬಗ್ಗೆ ನೆಟ್ಟಿಗರೂ ಪ್ರಶ್ನೆ ಮಾಡಿದ್ದರು. ಅಲ್ಲದೆ ಇದೇ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಟೀಕೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಅವರು ‘ಕಳೆದ ಬಾರಿಯೂ ಮೊದಲ ಪಟ್ಟಿಯಲ್ಲಿ ಮಹಿಳಾ ಶಾಸಕಿಯರು ಇರಲಿಲ್ಲ. ಈ ಬಾರಿಯೂ ಇದೇ ರೀತಿ ಆಗಿದೆ. ಹಾಗಂತ ಇಲ್ಲಿಗೆ ಎಲ್ಲವೂ ಮುಕ್ತಾಯವಾಗಿಲ್ಲ. ನಮ್ಮ ಎರಡನೇ ಪಟ್ಟಿಯಲ್ಲಿ ಮಹಿಳೆಯರು ಇದ್ದೇ ಇರುತ್ತಾರೆ. ಅಲ್ಲಿಯವರೆಗೆ ಸ್ವಲ್ಪ ತಾಳ್ಮೆಯಿಂದ ಕಾಯಬೇಕಷ್ಟೇ’ ಎಂದಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಸಂಪುಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಕಾಶ ನೀಡಲಾಗಿತ್ತು. ಈ ಬಾರಿ ಅವರಿಗೇ ಮತ್ತೆ ಅವಕಾಶ ನೀಡಲಾಗುತ್ತದೆಯೇ ಅಥವಾ ಬೇರೆಯವರಿಗೆ ಅವಕಾಶ ಸಿಗುತ್ತದೆಯೇ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments