ಸಿಎಂ ಹುದ್ದೆ ಕನಸಿನಲ್ಲಿರುವ ಡಿಕೆ ಶಿವಕುಮಾರ್ ಗೆ ಹುಟ್ಟಿಕೊಂಡ ಮತ್ತೊಬ್ಬ ಪ್ರತಿಸ್ಪರ್ಧಿ

Krishnaveni K
ಶುಕ್ರವಾರ, 2 ಜನವರಿ 2026 (09:35 IST)
ಬೆಂಗಳೂರು: ಹೊಸ ವರ್ಷದಲ್ಲಾದರೂ ತಮ್ಮ ಸಿಎಂ ಕುರ್ಚಿ ಕನಸು ನನಸಾಗಬಹುದು ಎಂಬ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಗೆ ಹೊಸ ಪ್ರತಿಸ್ಪರ್ಧಿ ಹುಟ್ಟಿಕೊಂಡಿದ್ದಾರೆ.

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಆಗುತ್ತದೆಂದು ಕಾದು ಕುಳಿತಿದ್ದ ಡಿಕೆ ಶಿವಕುಮಾರ್ ಬಣಕ್ಕೆ ಹೈಕಮಾಂಡ್ ನಿರಾಸೆ ಮಾಡಿತ್ತು. ಕಳೆದ ವರ್ಷ ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಹೈಕಮಾಂಡ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿತ್ತು.

ಯಾಕೆಂದರೆ ಸಿದ್ದರಾಮಯ್ಯನವರಿಂದಲೂ ಅಧಿಕಾರ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ. ಇದು ಸರ್ಕಾರದ ಮೇಲೆ ಪರಿಣಾಮ ಬೀರಬಹುದು ಎಂದು ಹೈಕಮಾಂಡ್ ನಾಯಕರಿಗೂ ಗೊತ್ತಿದೆ. ಆದರೆ ಈಗ ಹೊಸ ವರ್ಷದಲ್ಲಿ ತಮ್ಮ ಪರವಾಗಿ ಹೈಕಮಾಂಡ್ ನಿರ್ಧಾರ ಮಾಡಬಹುದು ಎಂದು ಕಾದು ಕುಳಿತಿರುವ ಡಿಕೆ ಶಿವಕುಮಾರ್ ಗೆ ಈಗ ಗೃಹಸಚಿವ, ದಲಿತ ನಾಯಕ ಪರಮೇಶ್ವರ್ ರೂಪದಲ್ಲಿ ಹೊಸ ಪ್ರತಿಸ್ಪರ್ಧಿ ಹುಟ್ಟಿಕೊಂಡಿದ್ದಾರೆ.

ಒಂದು ವೇಳೆ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ದಲಿತ ನಾಯಕರಾಗಿರುವ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಬೇಕು ಎಂದು ದಾಳ ಉರುಳಿಸಲು ಸಿದ್ದು ಬಣ ಮುಂದಾಗಿದೆ. ಇತ್ತ ಪರಮೇಶ್ವರ್ ಕೂಡಾ ನನಗೂ ಪದೋನ್ನತಿಯ ಆಕಾಂಕ್ಷೆ ಇದೆ ಎಂದಿದ್ದಾರೆ. ಹೀಗಾಗಿ ಈಗ ಡಿಕೆಶಿಗೆ ಈಗ ಹೊಸ ತಲೆನೋವು ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments