ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

Krishnaveni K
ಶನಿವಾರ, 6 ಡಿಸೆಂಬರ್ 2025 (09:03 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ವಿಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ನಡುವೆ ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಭರ್ಜರಿ ಅವಕಾಶವೊಂದು ಬಂದಿದೆ.

ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಪರ ನಿಲ್ಲಲು ಮುಖ್ಯ ಕಾರಣ ಅವರು ಅಹಿಂದ ನಾಯಕ ಎಂದು ಬಿಂಬಿತವಾಗಿರುವುದು. ಡಿಕೆ ಶಿವಕುಮಾರ್ ಸಿಎಂ ಆಗುವುದಕ್ಕೆ ದಲಿತ ನಾಯಕರಿಂದ ಆಕ್ಷೇಪವಿದೆ. ಇದೀಗ ಡಿಕೆಶಿಗೆ ಈಗ ಹಿಂದುಳಿದ ವರ್ಗದವರ ಬೆಂಬಲ ಪಡೆಯಲು ಒಳ್ಳೆಯ ಅವಕಾಶ ಎದುರಾಗಿದೆ.

ಅತಿ ಹಿಂದುಳಿದ ವರ್ಗಗಳ 11 ಸ್ವಾಮೀಜಿಗಳ ಒಕ್ಕೂಟ ನಿನ್ನೆ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನಿಮ್ಮ ನೇತೃತ್ವದಲ್ಲಿ ಅತಿ ಹಿಂದುಳಿದ ವರ್ಗದ ಸಮಾವೇಶ ಬೆಂಗಳೂರಿನಲ್ಲಿ ನಡೆಯಬೇಕು ಎಂದು ಬೇಡಿಕೆಯಿಟ್ಟಿದೆ.

ಹೀಗಾಗಿ ಈಗ ಡಿಕೆ ಶಿವಕುಮಾರ್ ಈ ಸ್ವಾಮೀಜಿಗಳ ಬೇಡಿಕೆಯಂತೆ ತಮ್ಮ ನೇತೃತ್ವದಲ್ಲಿ ಸಮಾವೇಶ ಮಾಡಿದರೆ ಅತಿ ಹಿಂದುಳಿದ ವರ್ಗದವರ ಬೆಂಬಲ ಪಡೆಯಲು ಸಾಧ್ಯವಾಗುತ್ತದೆ. ಇದು ಡಿಕೆ ಶಿವಕುಮಾರ್ ಗೆ ಪ್ಲಸ್ ಪಾಯಿಂಟ್ ಆಗಬಹುದು. ಇದನ್ನು ಅವರು ಬಳಸಿಕೊಳ್ಳುತ್ತಾರಾ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಧಂಪುರ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆ

ಬಿಜೆಪಿಗೆ ಕೌಂಟರ್ ಕೊಟ್ಟು ಅಬಕಾರಿ ಸಚಿವರ ಪರ ಬ್ಯಾಟ್ ಬೀಸಿದ ಡಿಕೆ ಶಿವಕುಮಾರ್‌, ಹೇಳಿದ್ದೇನು

ರಾಜ್ಯದಲ್ಲಿ ಮಾನವ, ವನ್ಯಜೀವಿ ಸಂಘರ್ಷದ ಬಗ್ಗೆ ಕೇಂದ್ರ ಸಚಿವರ ಜತೆ ಎಚ್‌ಡಿಕೆ ಮಹತ್ವದ ಚರ್ಚೆ

ಸಂಸತ್ ನ ಹೊರಗೆ ರಾಹುಲ್ ಗಾಂಧಿ, ಸಂಸದ ರವನೀತ್ ಸಿಂಗ್ ಬಿಟ್ಟು ವಾಗ್ಯುದ್ಧ video

ಶಬರಿಮಲೆ ಚಿನ್ನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments