Webdunia - Bharat's app for daily news and videos

Install App

ಸಿದ್ದರಾಮಯ್ಯ ಬಳಿ ಆರತಿ ತಟ್ಟೆಗೆ ಹಾಕಲೂ ದುಡ್ಡಿಲ್ಲ, ಇಲ್ಲೂ ಡಿಕೆ ಶಿವಕುಮಾರ್ ಸಹಾಯ

Krishnaveni K
ಶುಕ್ರವಾರ, 6 ಸೆಪ್ಟಂಬರ್ 2024 (16:19 IST)
ಸಕಲೇಶಪುರ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ನಾನೇ ಬಂಡೆಯಂತೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಅದು ಇಂದೂ ನಿಜವಾಗಿದೆ. ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಲು ಸಕಲೇಶಪುರಕ್ಕೆ ಬಂದಿದ್ದ ಸಿಎಂಗೆ ಡಿಕೆಶಿ ಅಕ್ಷರಶಃ ಸಾಥ್ ನೀಡಿದ್ದಾರೆ.

ಇಂದು ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮೊದಲು ಹೋಮ-ಹವನ ನೆರವೇರಿಸಲಾಯಿತು. ಬೆಳಿಗ್ಗೆ ಪೂಜಾ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಕೂಡಿಕೊಂಡರು.

ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಅರ್ಚಕ ಶಶಿಶೇಖರ್ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು. ಪೂಜೆ ಬಳಿಕ ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯ ಬಳಿ ದುಡ್ಡಿರಲಿಲ್ಲ. ಈ ವೇಳೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪರ್ಸಿನಿಂದ ಹಣ ತೆಗೆದು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ.

ಕೆಲವು ದಿನಗಳ ಮೊದಲು ಮುಡಾ ಹಗರಣ ಬೆಳಕಿಗೆ ಬಂದಾಗ ಸಿಎಂ ಸಿದ್ದರಾಮಯ್ಯಗೆ ಬೆಂಬಲವಾಗಿ ನಿಂತಿದ್ದು ಇದೇ ಡಿಕೆ ಶಿವಕುಮಾರ್. ಆಗ ಅವರು ನಾನು ಯಾವತ್ತೂ ಸಿದ್ದರಾಮಯ್ಯಗೆ ಬಂಡೆ ಥರಾ ಎಂದು ಹೇಳಿದ್ದರು. ಅದನ್ನು ಅವರು ಇಂದು ಅಕ್ಷರಶಃ ಪಾಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments