ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಸೋತರೆ ಜಮೀರ್ ಅಹ್ಮದ್ ಗೆ ಶಾಸ್ತಿ ಗ್ಯಾರಂಟಿ: ಡಿಕೆ ಶಿವಕುಮಾರ್ ಸುಳಿವು

Krishnaveni K
ಶನಿವಾರ, 16 ನವೆಂಬರ್ 2024 (12:46 IST)
ಬೆಂಗಳೂರು: ಚನ್ನಪಟ್ಟಣದಲ್ಲಿ ಈ ಬಾರಿ ಕಾಂಗ್ರೆಸ್ ಸೋತರೆ ಸಚಿವ ಜಮೀರ್ ಅಹ್ಮದ್ ಮೇಲೆ ಶಿಸ್ತು ಕ್ರಮ ಗ್ಯಾರಂಟಿ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆ ಈಗ ಸೋಲಿನ ಭಯ ಕಾಡಿದೆ. ಇದಕ್ಕೆ ಕಾರಣ ಕುಮಾರಸ್ವಾಮಿ ಬಗ್ಗೆ ಜಮೀರ್ ಅಹ್ಮದ್ ಆಡಿದ್ದ ಕರಿಯಾ ಎನ್ನುವ ಪದ ಬಳಕೆ. ಇದರಿಂದಾಗಿ ಚನ್ನಪಟ್ಟಣದಲ್ಲಿ ಒಕ್ಕಲಿಗರ ಮತಗಳು ಕಾಂಗ್ರೆಸ್ ಗೆ ಉಲ್ಟಾ ಹೊಡೆದಿದೆ ಎನ್ನಲಾಗುತ್ತಿದೆ.

ಒಂದು ವೇಳೆ ಇದು ನಿಜವಾದರೆ ಯೋಗೇಶ್ವರ್ ಗೆ ಗೆಲುವು ಕಷ್ಟ. ಕುಮಾರಸ್ವಾಮಿಯವರ ಬಗ್ಗೆ ಜಮೀರ್ ಹೇಳಿಕೆ ಕಾಂಗ್ರೆಸ್ ನಾಯಕರೊಳಗೇ ಅಸಮಾಧಾನ ತಂದಿದೆ. ಇದು ಪಕ್ಷಕ್ಕೆ ಡ್ಯಾಮೇಜ್ ತರುತ್ತದೆ ಎನ್ನುವಾಗ ಜಮೀರ್ ಕೈಯಲ್ಲಿ ಕ್ಷಮೆ ಕೂಡಾ ಕೇಳಿಸಿದ್ದಾಗಿದೆ.

ಆದರೆ ಈಗ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಕರಿಯಾ ಎಂದು ಜಮೀರ್ ಹೇಳಿದ್ದು ತಪ್ಪು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಅವರಿಗೆ ನಾವು ಬುದ್ಧಿ ಹೇಳಿದ್ದೇವೆ ಎಂದಿದ್ದಾರೆ. ಅದರ ಜೊತೆಗೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಲ್ಲ ಎಂದಿದ್ದಾರೆ. ಹೀಗಾಗಿ ಒಂದು ವೇಳೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಸೋತರೆ ಜಮೀರ್ ವಿರುದ್ಧ ಪಕ್ಷದ ನಾಯಕರು ಮುಗಿಬೀಳುವುದು ಖಚಿತ. ಆಗ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಂತೂ ಇದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments