Daily Horoscope

ದೆಹಲಿಗೆ ಹೋಗಿ ಬಂದ ಡಿಕೆ ಶಿವಕುಮಾರ್ ದಿಡೀರ್ ಆಗಿ ಕೈಗೊಂಡ ಆ ನಿರ್ಧಾರವೇನು

Krishnaveni K
ಮಂಗಳವಾರ, 20 ಜನವರಿ 2026 (10:01 IST)
ಬೆಂಗಳೂರು: ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋಗಿ ಬಂದಿದ್ದ ಡಿಕೆ ಶಿವಕುಮಾರ್ ದಿಡೀರ್ ಆಗಿ ಒಂದು ತೀರ್ಮಾನ ಕೈಗೊಂಡು ಎಲ್ಲರನ್ನೂ ಅಚ್ಚರಿಗೆ ದೂಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಹೋಗಿ ಎರಡು ದಿನ ಅಲ್ಲೇ ಮೊಕ್ಕಾಂ ಹೂಡಿದ್ದರು. ಆದರೆ ದೆಹಲಿಯಲ್ಲಿ ಏನು ಮಾತುಕತೆಯಾಗಿದೆ, ಅಂದುಕೊಂಡಂತೇ ರಾಹುಲ್ ಗಾಂಧಿ ಭೇಟಿಯಾಗಿ ಮಾತನಾಡಿದ್ದಾರಾ ಎಂಬುದನ್ನು ಅವರು ಖಚಿತವಾಗಿ ಹೇಳಿಲ್ಲ.

ಆದರೆ ದೆಹಲಿ ಭೇಟಿ ಗದ್ದಲದ ನಡುವೆ ಡಿಕೆ ಶಿವಕುಮಾರ್ ದಾವೋಸ್ ನಲ್ಲಿ ನಡೆಯುವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಲ್ಲ ಎನ್ನಲಾಗಿತ್ತು. ಇದರ ಬಗ್ಗೆ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಭಾರೀ ಟೀಕೆ ಮಾಡಿತ್ತು. ಇದರಿಂದಾಗಿ ಕರ್ನಾಟಕಕ್ಕೆ ದೊಡ್ಡ ಅವಕಾಶ ಕೈತಪ್ಪಿ ಹೋಯ್ತು ಎಂದು ಬಿವೈ ವಿಜಯೇಂದ್ರ ಹೇಳಿದ್ದರು.

ಆದರೆ ಈಗ ದೆಹಲಿಯಿಂದ ಬಂದ ಬಳಿಕ ಡಿಕೆ ಶಿವಕುಮಾರ್ ದಿಡೀರ್ ನಿರ್ಧಾರ ಬದಲಾಯಿಸಿಕೊಂಡಿದ್ದಾರೆ. ದಾವೋಸ್ ಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಇಂದೇ ಅವರು ದಾವೋಸ್ ಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments