ಹೋಗಲ್ಲ ನಾ ಹೋಗಲ್ಲ ಎನ್ನುತ್ತಲೇ ದೆಹಲಿಗೆ ಹಾರಿದ ಡಿಕೆ ಶಿವಕುಮಾರ್

Krishnaveni K
ಸೋಮವಾರ, 27 ಅಕ್ಟೋಬರ್ 2025 (09:53 IST)
ಬೆಂಗಳೂರು: ನಾನೆಲ್ಲೂ ಹೋಗಲ್ಲ ಎನ್ನುತ್ತಲೇ ಇದ್ದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ದಿಡೀರ್ ದೆಹಲಿಗೆ ಹೋಗಿದ್ದಾರೆ. ನಿನ್ನೆಯೇ ಅವರು ದೆಹಲಿಗೆ ಹೋಗಿದ್ದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಗುಸು ಗುಸು ಚರ್ಚೆ ಶುರುವಾಗಿದೆ.

ರಾಜ್ಯದಲ್ಲಿ ಈಗ ನವಂಬರ್ ಕ್ರಾಂತಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದರ ನಡುವೆ ಯತೀಂದ್ರ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ನೀಡಿದ್ದ ಹೇಳಿಕೆ ಭಾರೀ ಸದ್ದು ಮಾಡಿತ್ತು. ಇದರ ನಡುವೆ ಸಂಪುಟ ವಿಸ್ತರಣೆ ವಿಚಾರವೂ ಭಾರೀ ಚರ್ಚೆಯಲ್ಲಿದೆ.

ಇದೆಲ್ಲಾ ಬೆಳವಣಿಗೆ ನಡುವೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಚರ್ಚೆ ಬಗ್ಗೆ ಹೈಕಮಾಂಡ್ ಗೆ ವರದಿ ಸಲ್ಲಿಸಬಹುದು ಎನ್ನಲಾಗಿದೆ. ಇದಲ್ಲದೆ ಗಾಂಧಿ ಭಾರತ್ ಶತಮಾನೋತ್ಸವಕ್ಕೆ 100 ಕಾಂಗ್ರೆಸ್ ಕಚೇರಿಗಳಿಗೆ ಶಂಕು ಸ್ಥಾಪನೆ ಮಾಡಲು ಯೋಜನೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಚರ್ಚೆ ಮಾಡುವ ಇರಾದೆಯೂ ಡಿಕೆಶಿಗಿದೆ ಎನ್ನಲಾಗಿದೆ.

ಆದರೆ ಬಿಹಾರ ಚುನಾವಣೆ ಮುಗಿಯುವವರೆಗೂ ಕರ್ನಾಟಕದಲ್ಲಿ ನಾಯಕತ್ವ ವಿಚಾರವಾಗಿ ಮೌನಕ್ಕೆ ಶರಣಾಗಲು ಹೈಕಮಾಂಡ್ ತೀರ್ಮಾನಿಸಿದೆ. ಹಾಗಿದ್ದರೂ ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ತಿಯಾಗುತ್ತಿರುವ ಬೆನ್ನಲ್ಲೇ ಡಿಕೆಶಿ ದೆಹಲಿಗೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ಹವಾಮಾನದಲ್ಲಿ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

ಛತ್ತೀಸ್‌ಗಢ್: ಅಮಿತ್ ಶಾ ಗುಡುಗಿದ ಬೆನ್ನಲ್ಲೇ ಊಹೆಗೂ ಮೀರಿದ ನಕ್ಸಲರು ಶರಣು

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು

ಕರ್ನೂಲ್ ಬಸ್ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್‌

ಮುಂದಿನ ಸುದ್ದಿ
Show comments