ಎಸ್ಎಂ ಕೃಷ್ಣಗೆ ಕೊನೆಯ ಬಾರಿ ಹೂಗುಚ್ಛ ಇಡುವಾಗ ಡಿಕೆ ಶಿವಕುಮಾರ್ ಕಣ್ಣೀರು

Krishnaveni K
ಬುಧವಾರ, 11 ಡಿಸೆಂಬರ್ 2024 (16:00 IST)
ಮದ್ದೂರು: ಅಗಲಿದ ರಾಜಕೀಯ ಗುರು, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣಗೆ ಅಂತಿಮ ಸಂಸ್ಕಾರದ ವೇಳೆ ಹೂಗುಚ್ಛವನ್ನಿಡುವಾಗ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದರು.

ಮದ್ದೂರಿನ ಸೋಮನಹಳ್ಳಿಯಲ್ಲಿ ಎಸ್ಎಂ ಕೃಷ್ಣಗೆ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತಿಮ ವಿದಾಯ ಹೇಳಲಾಯಿತು. ಸರ್ಕಾರೀ ಗೌರವ ಸಮರ್ಪಣೆ ವೇಳೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಎಲ್ಲಾ ಗಣ್ಯರೂ ಹೂಗುಚ್ಛವನ್ನಿಟ್ಟು ಕೊನೆಯ ಬಾರಿಗೆ ಗೌರವ ಸಮರ್ಪಿಸಿದರು.

ಅದರಂತೆ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ತಮ್ಮ ಸರದಿ ಬಂದಾಗ ಹೂಗುಚ್ಛವನ್ನಿಟ್ಟರು. ಈ ವೇಳೆ ಗುರುವಿಗೆ ಕೊನೆಯ ಬಾರಿಗೆ ದೀರ್ಘ ನಮಸ್ಕಾರ ಮಾಡಿದ ಡಿಕೆ ಶಿವಕುಮಾರ್ ಭಾವುಕರಾದರು. ಕಣ್ಣೀರು ಒರೆಸುತ್ತಲೇ ಮರಳಿ ತಮ್ಮ ಸ್ಥಾನಕ್ಕೆ ಬಂದರು. ತಮ್ಮ ತಂದೆ ಸಮಾನರಾದ ಎಸ್ಎಂ ಕೃಷ್ಣ ಸಾವು ಡಿಕೆಶಿಗೆ ತೀರಾ ಆಘಾತ ತಂದಿದೆ.

ನಿನ್ನೆಯಿಂದ ಎಸ್ಎಂ ಕೃಷ್ಣ ಅಂತಿಮ ಯಾತ್ರೆ, ಅಂತಿಮ ಸಂಸ್ಕಾರದ ಎಲ್ಲಾ ಹೊಣೆ ಹೊತ್ತ ಡಿಕೆ ಶಿವಕುಮಾರ್ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ. ಜೊತೆಗೆ ಎಸ್ಎಂ ಕೃಷ್ಣ ಮೊಮ್ಮಗ ಡಿಕೆ ಶಿವಕುಮಾರ್ ಅಳಿಯನೂ ಹೌದು. ಹೀಗಾಗಿ ತಮ್ಮ ಆಪ್ತ ಹಿರಿಯ ನಾಯಕನನ್ನು ಕಳೆದುಕೊಂಡ ದುಃಖ ಅವರಲ್ಲಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments