Webdunia - Bharat's app for daily news and videos

Install App

ರಾಜ್ಯದ ಸೇವೆ ಮಾಡಬೇಕೆಂದು ನನ್ನ ಆಸೆ: ಅಂತೂ ಪರೋಕ್ಷವಾಗಿ ಸಿಎಂ ಕುರ್ಚಿಗೆ ಟವಲ್ ಹಾಕಿದ ಡಿಕೆ ಶಿವಕುಮಾರ್

Krishnaveni K
ಶನಿವಾರ, 28 ಸೆಪ್ಟಂಬರ್ 2024 (16:45 IST)
ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಉರುಳಾಗಿದ್ದರೆ ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ಸಿಎಂ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ.

ಇಂದು ಕನಕಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು ಪರೋಕ್ಷವಾಗಿ ಸಿಎಂ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಈಗ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಕೇಳಿಬರುತ್ತಿರುವ ಬೆನ್ನಲ್ಲೇ ಡಿಕೆಶಿ ಇಂತಹದ್ದೊಂದು ಹೇಳಿಕೆ ನೀಡಿರುವುದು ವಿಶೇಷವಾಗಿದೆ.

ಕನಕಪುರ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯದ ಸೇವೆ ಮಾಡಬೇಕು ಎಂದು ದೊಡ್ಡ ಪ್ರಯತ್ನ ಮತ್ತು ಹೋರಾಟ ನಡೆಯುತ್ತಿದೆ. ಈಗ ನಾನು ಏನೇ ಮಾತನಾಡಿದರೂ ಅದಕ್ಕೆ ಇನ್ನೊಂದು ಅರ್ಥ ಕಲ್ಪಿಸುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರ ಈ ಮಾತಿನಲ್ಲಿ ಮುಂದೆ ಸಿಎಂ ಆಗುವ ಕನಸಿದೆ ಎಂಬ ಒಳಾರ್ಥವಿದೆ.

ಕನಕಪುರ ನನ್ನ ಮನೆಯಿದ್ದಂತೆ. ನಾನು ಇಲ್ಲಿಗೆ ಕೇವಲ ಶಾಸಕನಾಗಿ ಬಂದಿದ್ದೇನೆ. ನೀವೆಲ್ಲಾ ನನ್ನ ಮನೆಯ ಮಕ್ಕಳು. ನಾನು ಶಾಸಕನಾಗುವುದಕ್ಕೆ ಮೊದಲು ಕನಕಪುರ ಹೇಗಿತ್ತು, ಈಗ ಹೇಗಾಗಿದೆ ನೋಡಿ. ರಸ್ತೆ ಕಟ್ಟಡಗಳು ಮಾಡಿಸಿದ್ದೇನೆ. ನಮ್ಮ ಮಕ್ಕಳಿಗೆ ಹಾರೈಸಲು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments