Webdunia - Bharat's app for daily news and videos

Install App

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

Krishnaveni K
ಮಂಗಳವಾರ, 3 ಮಾರ್ಚ್ 2026 (16:19 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗ ಶಾಸಕರು ಪ್ರತ್ಯೇಕ ಬಣಗಳಾಗಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು ಇದೆ. ಆದರೆ ಈಗ ಆ ಬಣ ಅಲ್ಲ ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ.

ಸಿಎಂ ಬದಲಾವಣೆ ವಿಚಾರ ಈಗ ತಕ್ಕಮಟ್ಟಿಗೆ ತಣ್ಣಗಾಗಿದೆ. ಹಾಗಿದ್ದರೂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣದ ಶಾಸಕರು ಆಗೊಮ್ಮೆ ಈಗೊಮ್ಮೆ ಸಭೆ ನಡೆಸಿ, ಹೇಳಿಕೆಗಳನ್ನು ನೀಡುವ ಮೂಲಕ ಚರ್ಚೆ ಚಾಲ್ತಿಯಲ್ಲಿರುವಂತೆ ಮಾಡುತ್ತಾರೆ.

ಇದೀಗ ಸ್ವತಃ ಡಿಕೆ ಶಿವಕುಮಾರ್ ಮಾರ್ಚ್ 10 ರಂದು ಔತಣ ಕೂಟ ಏರ್ಪಡಿಸಿದ್ದಾರೆ. ಇದಕ್ಕೆ ಕೇವಲ ತಮ್ಮ ಜೊತೆಗೆ ಗುರುತಿಸಿಕೊಂಡಿರುವ ಶಾಸಕರು ಮಾತ್ರವಲ್ಲ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಕಾಂಗ್ರೆಸ್ ಶಾಸಕರನ್ನೂ ಆಹ್ವಾನಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಡಿನ್ನರ್ ಪಾರ್ಟಿ ಆಯೋಜನೆಯಾಗಿದೆ. ಇದಕ್ಕೆ ಕಾರಣವೂ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿದ್ದಾರೆ. ಇದೇ ನೆಪದಲ್ಲಿ ಎಲ್ಲರನ್ನೂ ಔತಣಕೂಟಕ್ಕೆ ಆಹ್ವಾನಿಸಿದ್ದಾರೆ. ಆದರೆ ಇದರ ನಂತರ ಯಾವ ಬೆಳವಣಿಗೆಯಾಗಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments