Webdunia - Bharat's app for daily news and videos

Install App

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

Sampriya
ಬುಧವಾರ, 27 ಆಗಸ್ಟ್ 2025 (18:34 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರು  ಹೈಕಮಾಂಡ್‌ನ ಕೆಂಗಣ್ಣಿನಿಂದ ಬಚಾವಾಗಲು ಚಾಮುಂಡಿ ದೇವಸ್ಥಾನದ ಮೇಲೆ ವಿವಾದವನ್ನು ಹುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರು ಹಿಂದೂಗಳಿಗೆ, ಹಿಂದೂ ದೇವಸ್ಥಾನಗಳಿಗೆ ಅಪಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಅಲ್ಲ ಎನ್ನಲು ಇವರ್ಯಾರಯ ಎಂದು ಪ್ರಶ್ನೆ ಮಾಡಿದರು. 

ಹಿಂದೂ ಸಂಸ್ಕೃತಿ, ಹಿಂದೂಗಳು ಹಾಗೂ ಹಿಂದೂ ಪೂಜಾಸ್ಥಾನಗಳ ಮೇಲಿನ ನಿಮ್ಮ ನಿರಂತರವಾದ ಷಡ್ಯಂತ್ರಕ್ಕೆ ಶೀಘ್ರವೇ ಹಿಂದೂ ಸಮಾಜ ತಿಲಾಂಜಲಿ ಹಾಡಲಿದೆ ಎಂದು ಹೇಳಿದ್ದಾರೆ.

ಕಳೆದ ದಿನ ಹೇಳಿಕೆ ನೀಡಿದ್ದ ಶೋಭಾ, 'ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟ ಹತ್ತಬಾರದು. ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಅವರಿಗೆ ನೀಡಿರುವ ಆಹ್ವಾನವನ್ನು ಕೂಡಲೇ ವಾಪಸ್ ಪಡೆಯಬೇಕು' ಎಂದು ಆಗ್ರಹಿಸಿದ್ದರು.

ಮತ್ತೊಂದೆಡೆ ಪ್ರತಿಕ್ರಿಯೆ ನೀಡಿದ್ದ ಡಿಕೆಶಿ, 'ಚಾಮುಂಡೇಶ್ವರಿ ಎಲ್ಲ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ' ಎಂದಿದ್ದರು.

'ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ' ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments