ಮೈತ್ರಿ ಅಭ್ಯರ್ಥಿ ಗೆಲ್ಲಿಸುವ ಹೊಣೆ ಡಿಕೆ ಶಿವಕುಮಾರ್ ಹೆಗಲಿಗೆ..?

Webdunia
ಶನಿವಾರ, 16 ಮಾರ್ಚ್ 2019 (16:26 IST)
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಲೇಬೇಕು ಎಂದು ಕಾಂಗ್ರೆಸ್ - ಜೆಡಿಎಸ್ ಪಣ ತೊಟ್ಟಿವೆ.  ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಕಾಂಗ್ರೆಸ್ ನ ಚಾಣಕ್ಯ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಅವರ ಹೆಗಲಿಗೆ ವಹಿಸಲಾಗಿದೆ ಎಂಬ ಮಾತು ಇದೀಗ ಕೇಳಿ ಬರುತ್ತಿದೆ. 

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ಈ ಬಾರಿಯ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.  ಇನ್ನು ಕಾಂಗ್ರೆಸ್ ಕ್ಷೇತ್ರವನ್ನು ಜೆಡಿಎಸ್ ಗೆ  ಬಿಟ್ಟುಕೊಟ್ಟಿದ್ದು, ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯುವುದು ಫೈನಲ್ ಆಗಿದೆ.  2018ರ ನವೆಂಬರ್ ನಲ್ಲಿ ನಡೆದ ಉಪ ಚುನಾವಣೆಯಲ್ಲಿಯೂ ಕೂಡ, ಮಧು ಬಂಗಾರಪ್ಪ ಮತ್ತು ಬಿ.ವೈ.ರಾಘವೇಂದ್ರ ಮುಖಾಮುಖಿಯಾಗಿದ್ದರು. 

ಬಿ.ವೈ.ರಾಘವೇಂದ್ರ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ಮಧು ಬಂಗಾರಪ್ಪ ಅವರು ಕೇವಲ 52,148 ಮತಗಳ ಅಂತರದಿಂದ ಸೋಲು ಕಂಡಿದ್ದರು.  ಈ ಹಿನ್ನೆಲೆಯಲ್ಲಿಯೇ ಮತ್ತೆ ಮಧು ಬಂಗಾರಪ್ಪರಿಗೆ ಚುನಾವಣೆಗೆ ನಿಲ್ಲಿಸಲಾಗಿದ್ದು, ಈ ಬಾರಿ ಗೆಲ್ಲುವ ವಿಶ್ವಾಸವನ್ನು ಅವರು ಹೊಂದಿದ್ದಾರೆ. 

ಅಲ್ಲದೇ, ಈ ಬಾರಿ ಬಿ.ವೈ.ರಾಘವೇಂದ್ರ ಅವರನ್ನು ಕಟ್ಟಿ ಹಾಕುವ ಮೂಲಕ ಯಡಿಯೂರಪ್ಪ ಅವರಿಗೆ ಮುಖಭಂಗ ಉಂಟು ಮಾಡಬೇಕೆನ್ನುವುದೇ, ಕಾಂಗ್ರೆಸ್-ಜೆಡಿಎಸ್ ತಂತ್ರವಾಗಿದೆ.  ಇದಕ್ಕಾಗಿಯೇ ಇದೀಗ ಡಿ.ಕೆ. ಶಿವಕುಮಾರ್ ಗೆ ಉಸ್ತುವಾರಿ ನೀಡಲು ಯೋಜಿಸಲಾಗಿದೆ. 



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments