ದೆಹಲಿ ಚುನಾವಣೆಗೆ ಕಾಲಿಟ್ಟ ಡಿಕೆ ಬಾಸು: ಡೆಲ್ಲಿಯಲ್ಲೂ ಡಿಕೆ ಶಿವಕುಮಾರ್ ಮ್ಯಾಜಿಕ್ ಮಾಡ್ತಾರಾ

Krishnaveni K
ಮಂಗಳವಾರ, 7 ಜನವರಿ 2025 (08:58 IST)
ನವದೆಹಲಿ: ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಪಾಲಿಗೆ ಟ್ರಬಲ್ ಶೂಟರ್ ಎಂದೇ ಹೇಳಲಾಗುತ್ತದೆ. ಇದೀಗ ಡಿಕೆ ಬಾಸು ಡೆಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಹೊರಟಿದ್ದಾರೆ. ಅಲ್ಲೂ ಅವರು ಮ್ಯಾಜಿಕ್ ಮಾಡುತ್ತಾರಾ ನೋಡಬೇಕು.


ರಾಜ್ಯದಲ್ಲಿ ಇತ್ತೀಚೆಗೆ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆ ಗೆಲುವು, ಅಷ್ಟೇ ಏಕೆ ಅದಕ್ಕೆ ಮೊದಲು ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಲು ಡಿಕೆ ಶಿವಕುಮಾರ್ ಅವರ ಶ್ರಮವೇ ಕಾರಣ.

ಇದೀಗ ಡಿಕೆ ಶಿವಕುಮಾರ್ ಗೆ ರಾಷ್ಟ್ರ ಕಾಂಗ್ರೆಸ್ ನಾಯಕರು ದೆಹಲಿ ಚುನಾವಣೆಯ ಹೊಣೆ ನೀಡಿದ್ದಾರೆ. ಕಾಂಗ್ರೆಸ್ ನ ಸಂಘಟನಾ ಚತುರ ಎಂದೇ ಕರೆಯಿಸಿಕೊಳ್ಳುವ ಡಿಕೆಶಿ ಡೆಲ್ಲಿಗೆ ಹೋಗಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಯಶಸ್ವಿಯಾಗಿದೆ. ಡೆಲ್ಲಿಯಲ್ಲೂ ಕಾಂಗ್ರೆಸ್ ಗೆದ್ದರೆ ಗ್ಯಾರಂಟಿ ನೀಡುತ್ತೇವೆ ಎಂದು ಜನರಲ್ಲಿ ಭರವಸೆ ತುಂಬಲು ಯತ್ನಿಸಿದ್ದಾರೆ.

ದೆಹಲಿಯಲ್ಲಿ ಈಗ ಕಾಂಗ್ರೆಸ್ ಇಂಡಿಯಾ ಒಕ್ಕೂಟದಲ್ಲಿರುವ ಆಪ್ ಪಕ್ಷದ ವಿರೋಧ ಕಟ್ಟಿಕೊಂಡಿದೆ. ಹೀಗಾಗಿ ಆಪ್ ನ ಬೆಂಬಲವಿಲ್ಲದೇ ಕಾಂಗ್ರೆಸ್ ಗೆಲ್ಲಬೇಕಿದೆ. ಅದಕ್ಕೆ ಪ್ರಬಲ ನಾಯಕರೊಬ್ಬರ ಅಗತ್ಯವಿದೆ. ಆ ಕಾರಣಕ್ಕೆ ಡಿಕೆಶಿಯನ್ನು ಕರೆಸಿಕೊಳ್ಳಲಾಗಿದೆ. ಡೆಲ್ಲಿಯಲ್ಲಿ ಡಿಕೆಶಿ ಮ್ಯಾಜಿಕ್ ಮಾಡಿದರೆ ಅವರ ಖದರೇ ಬೇರೆಯಾಗಲಿದೆ ಬಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments