ತಡರಾತ್ರಿ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಮಹತ್ವದ ಕಾರ್ಯಾಚರಣೆ

Krishnaveni K
ಗುರುವಾರ, 12 ಫೆಬ್ರವರಿ 2026 (10:04 IST)
ನವದೆಹಲಿ: ದೆಹಲಿಗೆ ತೆರಳಿರುವ ಡಿಸಿಎಂ ಡಿಕೆ ಶಿವಕುಮಾರ್ ತಡರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಮೂಲಕ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ.

ಅಸ್ಸಾಂ ಚುನಾವಣೆ ತಯಾರಿ ಸಭೆಗೆ ಹಾಜರಾಗುವ ನೆಪದಲ್ಲಿ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ನಾಯಕತ್ವ ಬದಲಾವಣೆ ವಿಚಾರವಾಗಿಯೂ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ತೀರ್ಮಾನಿಸಿದ್ದಾರೆ. ಅದರಂತೆ ಎರಡು ದಿನ ದೆಹಲಿಯಲ್ಲೇ ಬೀಡುಬಿಟ್ಟಿರುವ ಡಿಸಿಎಂ ನಿನ್ನೆ ತಡರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ.

ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ತಡರಾತ್ರಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಗೆ ಸಹೋದರ ಡಿಕೆ ಸುರೇಶ್ ಕೂಡಾ ಸಾಥ್ ನೀಡಿದ್ದಾರೆ.

ಈ ವೇಳೆ ಏನು ಮಾತುಕತೆಯಾಗಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ಸದ್ಯಕ್ಕೆ ಸಂಸತ್ ಕಲಾಪ ನಡೆಯುತ್ತಿರುವುದರಿಂದ ರಾಹುಲ್ ಗಾಂಧಿ ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ. ಇದನ್ನು ಡಿಕೆ ಶಿವಕುಮಾರ್ ಕೂಡಾ ನಿನ್ನೆ ಸ್ಪಷ್ಟಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ವಾಪಾಸ್‌ ಬಂದ್ರೆ ಅಷ್ಟೆ, ವಿಜಯ್ ಮಲ್ಯಗೆ ಹೈಕೋರ್ಟ್ ಚಾಟಿ

ವಿಡಿಯೋ ಹೆಚ್ಚು ವೀಕ್ಷಣೆ ಪಡೆಯಲು ಮಾಡಿದ ಯಡವಟ್ಟಿಗೆ ಫುಡ್ ವ್ಲೋಗರ್‌, ಏನಾಯಿತು

ಆದಾಯಕ್ಕಿಂತ ಹೆಚ್ಚು ಆಸ್ತಿ, ಶೋಧಕ್ಕೆ ಹೋದ ಲೋಕಾಯುಕ್ತ ಖಾಕಿ ಫುಲ್ ಶಾಕ್

ಫೆಬ್ರವರಿ 18-22 ರವರೆಗೆ ಬ್ರೆಜಿಲ್ ಅಧ್ಯಕ್ಷ ಲೂಲಾ ಭಾರತಕ್ಕೆ ಭೇಟಿ

ರೇಫ್ ಆ್ಯಂಡ್ ಗರ್ಭಪಾತ ಆರೋಪ, ಕೈ ನಾಯಕ ರಾಹುಲ್‌ ಮಮ್ಕೂಟತಿಲ್‌ಗೆ ಜಾಮೀನು

ಮುಂದಿನ ಸುದ್ದಿ
Show comments