Publish Date: Tue, 14 Apr 2020 (16:18 IST)
Updated Date: Tue, 14 Apr 2020 (16:20 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಳ ಹಂತದ ರಾಜಕೀಯ ಮಾಡ್ತಿದ್ದಾರೆ.
ಆದರೆ ನಾನು ಅವರ ಥರ ಕೆಳ ಹಂತದ ರಾಜಕಾರಣ ಮಾಡಲು ಹೋಗುವುದಿಲ್ಲ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಅಂಬೇಡ್ಕರ್ ಪುತ್ಥಳಿಗೆ ಮಾರ್ಲಾಪಣೆ ಮಾಡಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ತಮ್ಮ ರಾಜೀನಾಮೆಗೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ಡಿ.ಕೆ.ಶಿವಕುಮಾರ್ ರವರ ಸದ್ಗುಣಗಳು ಮಾತ್ರ ಇದುವರೆಗೂ ಗೊತ್ತಿತ್ತು. ಆದರೆ ಅವರ ದೊಡ್ಡ ಗುಣ ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು. ಡಿ.ಕೆ.ಶಿವಕುಮಾರ್ ರೀತಿ ನಾನು ಕೆಳ ಹಂತದ ರಾಜಕಾರಣ ಮಾಡಕ್ಕೆ ನಾನು ಹೋಗುವುದಿಲ್ಲ ಎಂದರು.