ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

Krishnaveni K
ಶನಿವಾರ, 22 ನವೆಂಬರ್ 2025 (12:29 IST)
ಬೆಂಗಳೂರು: ಹೇಗಾದರೂ ಮಾಡಿ ಸಿಎಂ ಪಟ್ಟಕ್ಕೇರಲು ಡಿಕೆ ಶಿವಕುಮಾರ್ ತೆರೆಮರೆಯಲ್ಲೇ ಶತಪ್ರಯತ್ನ ನಡೆಸುತ್ತಿದ್ದಾರೆ. ಇದರ ನಡುವೆ ಡಿಕೆಶಿ ಹೊಸ ದಾಳ ಉರುಳಿಸಿದ್ದಾರೆ ಎನ್ನಲಾಗಿದೆ.
 

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಿದ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಐದು ವರ್ಷವೂ ನಾನೇ ಸಿಎಂ ಆಗಿರಲಿದ್ದೇನೆ ಎಂದಿದ್ದಾರೆ. ಇದರ ನಡುವೆ ಡಿಕೆಶಿ ಈಗ ಶಾಸಕರ ಬೆಂಬಲ ಪಡೆಯಲು ಮುಂದಾಗಿದ್ದಾರೆ.

ಇಂದು ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಿದ್ದು, ಅವರನ್ನು ಸಿದ್ದರಾಮಯ್ಯ ಮತ್ತು ಡಿಕೆಶಿ ಪ್ರತ್ಯೇಕವಾಗಿ ಭೇಟಿ ಮಾಡುತ್ತಿದ್ದಾರೆ. ಇದರ ನಡುವೆ ಡಿಕೆಶಿ ಶಾಸಕರ ಬೆಂಬಲ ಪಡೆಯಲು ಮುಂದಾಗಿದ್ದಾರೆ. ತಮ್ಮ ಪರ ನಿಲ್ಲುವಂತೆ ಶಾಸಕರಿಗೆ ಮನವಿ ಮಾಡುತ್ತಿದ್ದ ಸಹಿ ಪಡೆಯುತ್ತಿದ್ದಾರೆ. ಶಾಸಕರ ಬೆಂಬಲ ತಮಗಿದೆ ಎಂದು ಸಹಿ ಮೂಲಕ ಹೈಕಮಾಂಡ್ ಗೆ ಸಂದೇಶ ರವಾನಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ನಿನ್ನೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಮತ್ತು ವೀರೇಂದ್ರ ಪಪ್ಪಿಯವರನ್ನು ಭೇಟಿ ಮಾಡಿದ್ದರು ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ಮುಂದಿನ ಸುದ್ದಿ
Show comments