Publish Date: Sat, 30 May 2026 (10:41 IST)
Updated Date: Sat, 30 May 2026 (10:44 IST)
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲು ದಿನಾಂಕ ಫಿಕ್ಸ್ ಆಗಿದೆ. ಈ ದಿನಕ್ಕೆ ವಿಶೇಷತೆಯಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸ್ಥಾನಕ್ಕೆ ಮೊನ್ನೆ ಸಿದ್ದರಾಮಯ್ಯ ರಾಜೀನಾಮೆ ಸೂಚಿಸಿದ್ದರು. ಇದಾದ ಬಳಿಕ ಹೊಸ ಕ್ಯಾಬಿನೆಟ್ ರಚನೆ ಸಲುವಾಗಿ ನಿನ್ನೆಯಿಡೀ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರು ಚರ್ಚೆ ನಡೆಸಿದ್ದರು.
ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತವಾಗಿದ್ದು ಇಂದು ಸಂಜೆ ಶಾಸಕಾಂಗ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ. ಬುಧವಾರ ಸಂಜೆ 4 ಗಂಟೆ ಬಳಿಕ ಡಿಕೆ ಶಿವಕುಮಾರ್ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬುಧವಾರ ಎನ್ನುವುದು ವಿಶೇಷ ದಿನವಾಗಿದೆ. ಡಿಕೆ ಶಿವಕುಮಾರ್ ಜ್ಯೋತಿಷ್ಯವನ್ನು ನಂಬುತ್ತಾರೆ. ತಮ್ಮ ಪ್ರಮಾಣ ವಚನಕ್ಕೆ ಸೂಕ್ತ ದಿನಾಂಕ ಸೂಚಿಸಿ ಎಂದು ತಮ್ಮ ಗುರು ದ್ವಾರಕಾನಾಥ್ ಗುರೂಜಿಯವರನ್ನು ಕೇಳಿಕೊಂಡಿದ್ದರು. ಅದರಂತೆ ಇದೀಗ ಬುಧವಾರ ವಿಶೇಷ ದಿನದಂದೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧವಾರ ಆಧ್ಯಾತ್ಮಿಕವಾಗಿ ಮತ್ತು ಧಾರ್ಮಿಕವಾಗಿ ಅತ್ಯಂತ ವಿಶೇಷ ಹಾಗೂ ಶಕ್ತಿಶಾಲಿಯಾದ ದಿನವಾಗಿದೆ. ಈ ದಿನ ಕೆಲವು ಅಪರೂಪದ ಗ್ರಹಗಳ ಸಂಯೋಜನೆ ಮತ್ತು ಹಬ್ಬಗಳ ಸಮ್ಮಿಲನವಾಗುತ್ತಿದೆ. ಈ ದಿನ ಯಾವುದೇ ಹೊಸ ಉದ್ಯೋಗ, ವ್ಯಾಪಾರ ಆರಂಭಿಸಲು ಅಥವಾ ಒಪ್ಪಂದಗಳಿಗೆ ಸಹಿ ಹಾಕಲು ಜ್ಯೋತಿಷ್ಯದ ಪ್ರಕಾರ ಅತ್ಯಂತ ಶ್ರೇಷ್ಠ ದಿನವಾಗಿದೆ. ಶಿವನಿಗೆ ಅತ್ಯಂತ ಪ್ರಿಯವಾದ ಕೃಷ್ಣ ಪಕ್ಷದ ಪ್ರದೋಷ ವ್ರತವೂ ಕೂಡ ಇದೇ ದಿನದಂದು ಯೋಗವಾಗುತ್ತಿದೆ. ಹೀಗಾಗಿ ಈ ವಿಶೇಷ ದಿನದಂದೇ ಡಿಕೆಶಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ