Select Your Language

Notifications

webdunia
webdunia
webdunia
webdunia

ಅಧಿಕೃತವಾಗಿ ಬಿಕೆ ಹರಿಪ್ರಸಾದ್‌ಗೆ ಕೆಪಿಸಿಸಿ ಅಧಿಕಾರ ಹಸ್ತಾಂತರ ಮಾಡಿದ ಡಿಕೆ ಶಿವಕುಮಾರ್

bk hariprasadh
Photo Credit X
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.

ನಗರದ ಪ್ಯಾಲೆಸ್ ಗ್ರೌಂಡ್‌ನಲ್ಲಿ ಮೂರು ಚರಕಗಳಿಂದ ಸಾಂಕೇತಿಕವಾಗಿ ನೂಲು ನೇಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. 

ಸಿಎಂ ಡಿ.ಕೆ.ಶಿವಕುಮಾರ್ ಅವರು ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಅಧಿಕಾರ ಹಸ್ತಾಂತರ ದಾಖಲೆಗಳಿಗೆ ಡಿಕೆ ಶಿವಕುಮಾರ್ ಹಾಗೂ ಬಿಕೆ ಹರಿಪ್ರಸಾದ್ ಇಬ್ಬರೂ ಸಹಿ ಹಾಕಿದರು.

ಇನ್ನೂ ಬಿಕೆ ಹರಿಪ್ರಸಾದ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿಕೆ ಸುರೇಶ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಹೆಚ್.ಕೆ ಪಾಟೀಲ್, ಕೆ.ಹೆಚ್ ಮುನಿಯಪ್ಪ, ಚೆಲುವರಾಯಸ್ವಾಮಿ, ಆರ್.ವಿ ದೇಶಪಾಂಡೆ, ಎಂ.ಬಿ ಪಾಟೀಲ್, ಅಂಜಲಿ ನಿಂಬಾಳ್ಕರ್, ಲಕ್ಷ್ಮಿ ಹೆಬ್ಬಾಳ್ಕರ್, ವೀರಪ್ಪ ಮೊಯ್ಲಿ, ಸಲೀಂ ಅಹಮದ್, ಝಮೀರ್ ಅಹಮದ್ ಖಾನ್, ಯು.ಟಿ ಖಾದರ್, ಕೆ.ಜೆ ಜಾರ್ಜ್, ಹೆಚ್.ಸಿ ಮಹದೇವಪ್ಪ, ತನ್ವೀರ್ ಸೇಠ್, ವಸಂತ್ ಕುಮಾರ್, ಮಂಜುನಾಥ್ ಭಂಡಾರಿ ಮೊದಲಾದವರು ಭಾಗಿಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರ: ದೇವಸ್ಥಾನದ ಸಭಾ ಮಂಟಪ ಕುಸಿದು 7 ಮಂದಿ ಸಾವನ್ನಪ್ಪಿದ ಆಘಾತಕಾರಿ ಘಟನೆಯ ವಿಡಿಯೋ