ನನ್ನ ಹೆದರಿಸಲು ಬಂದರೆ ನಾನು ಹೆದರೋನಲ್ಲ: ಡಿಕೆ ಶಿವಕುಮಾರ್

Webdunia
ಬುಧವಾರ, 20 ಜೂನ್ 2018 (12:11 IST)
ಬೆಂಗಳೂರು: ಐಟಿ ದಾಳಿ ಸಂದರ್ಭಹಣಕಾಸಿನ ಅವ್ಯವಹಾರ ಪ್ರಕರಣದಲ್ಲಿ ಸಿಲುಕಿರುವ ಸಚಿವ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಹರಿಹಾಯ್ದಿದ್ದಾರೆ.

‘ನನ್ನನ್ನೇ ಯಾಕೆ ಟಾರ್ಗೆಟ್ ಮಾಡಲಾಗುತ್ತಿಲ್ಲ. ನಾನೇನೂ ತಪ್ಪೇ ಮಾಡಿಲ್ಲ. ನನ್ನನ್ನು ಹೆದರಿಸಲು ಬಂದ್ರೆ ನಾನು ಹೆದರಿ ಕೂರವವನಲ್ಲ. ಈ ದೇಶದಲ್ಲಿ ಕಾನೂನು ಇದೆ. ನ್ಯಾಯಸ್ಥಾನದ ಮೇಲೆ ನನಗೆ ನಂಬಿಕೆ ಇದೆ. ಎಲ್ಲವನ್ನೂ ಎದುರಿಸುತ್ತೇನೆ. ಐಟಿ ಅಧಿಕಾರಿಗಳಿಗೆ ಬೇಕಾದ ಸಹಕಾರ ಕೊಡುತ್ತೇನೆ. ನನಗೆ ಸಮನ್ಸ್ ಬಂದಿಲ್ಲ, ತನಿಖೆಗೆ ಸಹಕರಿಸುವಂತೆ ನೋಟಿಸ್ ಬಂದಿದೆಯಷ್ಟೇ’ ಎಂದು ಮಾಧ್ಯಮಗಳ ಮುಂದೆ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಟಾಂಗ್ ನೀಡಿದ ಡಿಕೆಶಿ ‘ಬಿಜೆಪಿಯವರು ಯಾರನ್ನು ಸಿಎಂ ಮಾಡಬೇಕೆಂದಿದ್ದಾರೋ ಅವರ ಅಕ್ರಮಗಳ ಪಟ್ಟಿ ನೀಡಲಾ? ನನ್ನ ಬಳಿಯೂ ಹಲವು ಡೈರಿಗಳಿವೆ. ಯಾರ ಮನೆಯಲ್ಲಿ ಡೈರಿಯಿದೆ. ಯಾರಿಗೆ ಎಷ್ಟು ಕೊಟ್ಟಿದ್ದಾರೆ ಎನ್ನುವುದೆಲ್ಲವೂ ನನಗೆ ಗೊತ್ತು. ಸಮಯ ಬಂದಾಗ ಒಂದೊಂದೇ ಹೊರ ಹಾಕುತ್ತೇನೆ’ ಎಂದು ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments