Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕರಿಗೆ ಇಂದು ಔತಣಕೂಟ, ಡಿಕೆ ಶಿವಕುಮಾರ್ ಸ್ಪಾನ್ಸರ್

Krishnaveni K
ಗುರುವಾರ, 13 ಮಾರ್ಚ್ 2025 (10:17 IST)
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಇಂದು ವಿಶೇಷ ಔತಣಕೂಟ ಆಯೋಜಿಸಲಾಗಿದೆ. ಇದಕ್ಕೆ ಸ್ಪಾನ್ಸರ್ ಡಿಕೆ ಶಿವಕುಮಾರ್. ಕಾರಣವೇನು ಇಲ್ಲಿದೆ ಡೀಟೈಲ್ಸ್.

ಕಾಂಗ್ರೆಸ್ ಶಾಸಕರು ಈ ಹಿಂದೆ ಸಿಎಂ ಬದಲಾವಣೆ ವಿಚಾರವಾಗಿ ಡಿನ್ನರ್ ಕೂಟ ಆಯೋಜಿಸಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಈಗ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲಾ ನಾಯಕರಿಗೂ ಔತಣ ಕೂಟ ನೀಡಲಿದ್ದಾರೆ.

ಇದಕ್ಕೆ ಕಾರಣವೂ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿದ್ದಾರೆ. ಈ ಕಾರಣಕ್ಕೇ ಎಲ್ಲಾ ನಾಯಕರಿಗೂ ಔತಣ ಕೂಟ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಔತಣ ಕೂಟ ನಡೆಯಲಿದೆ.

ಒಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೆರೆಮರೆಯಲ್ಲಿ ಪ್ರಯತ್ನಗಳು ನಡೆಯುತ್ತಿವೆ. ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತಗಳಿರುವಾಗಲೇ ಈ ಔತಣ ಕೂಟ ಆಯೋಜಿಸುವುದು ಮಹತ್ವ ಪಡೆದಿದೆ. ಅದರಲ್ಲೂ ನಿನ್ನೆ ಸದನದಲ್ಲೇ ನಾನೇ ಪೂರ್ಣಾವಧಿಗೂ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಇಂದು ಔತಣ ಕೂಟ ಪಡೆದಿರುವುದು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments