ದರ್ಶನ್ ವಿಚಾರ ಬಿಟ್ಟು ಬಿಡ್ರಪ್ಪಾ ಎಂದು ಕೈ ಮುಗಿದ ಡಿಕೆ ಶಿವಕುಮಾರ್

Krishnaveni K
ಶನಿವಾರ, 7 ಸೆಪ್ಟಂಬರ್ 2024 (14:12 IST)
ಬೆಂಗಳೂರು: ಹತ್ಯೆ ಮಾಡಿ ಬಳ್ಳಾರಿ ಜೈಲಿನಲ್ಲಿ ಕಳೆಯುತ್ತಿರುವ ನಟ ದರ್ಶನ್ ಬಗ್ಗೆ ಕೇಳಿದಾಗ ಡಿಸಿಎಂ ಡಿಕೆ ಶಿವಕುಮಾರ್, ದರ್ಶನ್ ವಿಚಾರ ಬಿಟ್ಟು ಬಿಡ್ರಪ್ಪಾ ಎಂದು ಕೈ ಮುಗಿದಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಈ ರೀತಿ ಮಾತನಾಡಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರವೇ ಮುಡಾ ಹಗರಣ ಮುಚ್ಚಿ ಹಾಕಲು ದರ್ಶನ್ ಫೋಟೋ ಹರಿಯಬಿಟ್ಟಿದೆ ಎಂದು ಗಂಭೀರ್ ಆರೋಪ ಮಾಡಿದ್ದರು.

ಇದಕ್ಕೆ ಡಿಕೆಶಿ ಈ ರೀತಿ ವ್ಯಂಗ್ಯವಾಗಿ ಮಾತನಾಡಿದ್ದಾರೆ. ನನಗೆ ಆ ವಿಚಾರವೇ ಗೊತ್ತಿಲ್ಲ. ನಿನ್ನೆಯೆಲ್ಲಾ ನಾನು ಎತ್ತಿನಹೊಳೆ ಯೋಜನೆ ಚಾಲನೆ ವಿಚಾರದಲ್ಲಿ ಬ್ಯುಸಿಯಾಗಿದ್ದೆ. ಕೇಂದ್ರ ಸಚಿವರಿಗೆ ಮಹದಾಯಿ ಸಮಸ್ಯೆ ಇತ್ಯರ್ಥ ಮಾಡಿಕೊಡಲಿ, ಸ್ವಲ್ಪ ಕೇಂದ್ರದಿಂದ ದುಡ್ಡು ಕೊಡಿಸಲಿ ಎಂದು ಇಲ್ಲಿಂದಲೇ ದೀರ್ಘದಂಡ ನಮಸ್ಕಾರ ಹಾಕಿ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ದರ್ಶನ್ ವಿಚಾರ ಎಲ್ಲಾ ಬಿಟ್ಟು ಬಿಡ್ರಪ್ಪಾ ಮೊದಲು ನಮ್ಮ ಕೆಲಸ ಮಾಡಿಕೊಡಲಿ ಎಂದಿದ್ದಾರೆ. ಈವತ್ತು ಗಣೇಶ ಹಬ್ಬ. ನಮ್ಮ ರಾಜ್ಯಕ್ಕೆ ಮಹದಾಯಿ ಸಮಸ್ಯೆ ಪರಿಹಾರ ಮಾಡಿಕೊಡಲಿ, ಆ ವಿಘ್ನ ವಿನಾಯಕ ಅವರಿಗೆ ಒಳ್ಳೆಯದು ಮಾಡಲಿ ಎಂದು ಡಿಕೆ ಶಿವಕುಮಾರ್ ಕೈ ಮುಗಿದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments