Webdunia - Bharat's app for daily news and videos

Install App

ದರ್ಶನ್ ವಿಚಾರ ಬಿಟ್ಟು ಬಿಡ್ರಪ್ಪಾ ಎಂದು ಕೈ ಮುಗಿದ ಡಿಕೆ ಶಿವಕುಮಾರ್

Krishnaveni K
ಶನಿವಾರ, 7 ಸೆಪ್ಟಂಬರ್ 2024 (14:12 IST)
ಬೆಂಗಳೂರು: ಹತ್ಯೆ ಮಾಡಿ ಬಳ್ಳಾರಿ ಜೈಲಿನಲ್ಲಿ ಕಳೆಯುತ್ತಿರುವ ನಟ ದರ್ಶನ್ ಬಗ್ಗೆ ಕೇಳಿದಾಗ ಡಿಸಿಎಂ ಡಿಕೆ ಶಿವಕುಮಾರ್, ದರ್ಶನ್ ವಿಚಾರ ಬಿಟ್ಟು ಬಿಡ್ರಪ್ಪಾ ಎಂದು ಕೈ ಮುಗಿದಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಈ ರೀತಿ ಮಾತನಾಡಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರವೇ ಮುಡಾ ಹಗರಣ ಮುಚ್ಚಿ ಹಾಕಲು ದರ್ಶನ್ ಫೋಟೋ ಹರಿಯಬಿಟ್ಟಿದೆ ಎಂದು ಗಂಭೀರ್ ಆರೋಪ ಮಾಡಿದ್ದರು.

ಇದಕ್ಕೆ ಡಿಕೆಶಿ ಈ ರೀತಿ ವ್ಯಂಗ್ಯವಾಗಿ ಮಾತನಾಡಿದ್ದಾರೆ. ನನಗೆ ಆ ವಿಚಾರವೇ ಗೊತ್ತಿಲ್ಲ. ನಿನ್ನೆಯೆಲ್ಲಾ ನಾನು ಎತ್ತಿನಹೊಳೆ ಯೋಜನೆ ಚಾಲನೆ ವಿಚಾರದಲ್ಲಿ ಬ್ಯುಸಿಯಾಗಿದ್ದೆ. ಕೇಂದ್ರ ಸಚಿವರಿಗೆ ಮಹದಾಯಿ ಸಮಸ್ಯೆ ಇತ್ಯರ್ಥ ಮಾಡಿಕೊಡಲಿ, ಸ್ವಲ್ಪ ಕೇಂದ್ರದಿಂದ ದುಡ್ಡು ಕೊಡಿಸಲಿ ಎಂದು ಇಲ್ಲಿಂದಲೇ ದೀರ್ಘದಂಡ ನಮಸ್ಕಾರ ಹಾಕಿ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ದರ್ಶನ್ ವಿಚಾರ ಎಲ್ಲಾ ಬಿಟ್ಟು ಬಿಡ್ರಪ್ಪಾ ಮೊದಲು ನಮ್ಮ ಕೆಲಸ ಮಾಡಿಕೊಡಲಿ ಎಂದಿದ್ದಾರೆ. ಈವತ್ತು ಗಣೇಶ ಹಬ್ಬ. ನಮ್ಮ ರಾಜ್ಯಕ್ಕೆ ಮಹದಾಯಿ ಸಮಸ್ಯೆ ಪರಿಹಾರ ಮಾಡಿಕೊಡಲಿ, ಆ ವಿಘ್ನ ವಿನಾಯಕ ಅವರಿಗೆ ಒಳ್ಳೆಯದು ಮಾಡಲಿ ಎಂದು ಡಿಕೆ ಶಿವಕುಮಾರ್ ಕೈ ಮುಗಿದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments