Daily Horoscope

ಬೆಂಗಳೂರು ಮಳೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪೋಸ್ಟ್ ವೈರಲ್

Krishnaveni K
ಶನಿವಾರ, 4 ಮೇ 2024 (10:00 IST)
ಬೆಂಗಳೂರು: ದಾಖಲೆಯ ತಾಪಮಾನ ಕಂಡಿದ್ದ ರಾಜ್ಯ ರಾಜಧಾನಿ ಬೆಂಗಳೂರಿಗೆ ಕಳೆದ ಎರಡು ದಿನಗಳಿಂದ ಮಳೆಯಾಗಿದ್ದು, ಜನರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಇದೀಗ ಮಳೆಯ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಡಿರುವ ಪೋಸ್ಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ.

ನಿನ್ನೆ ಮಧ್ಯಾಹ್ನದಿಂದ ಮೆಜೆಸ್ಟಿಕ್, ರಾಜಾಜಿನಗರ, ವಿಧಾನಸೌಧ, ಕೆಆರ್ ಪುರಂ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಮಳೆಯಿಂದಾಗಿ ಮಂಜು ಮುಸುಕಿದಂತಹ ವಾತಾವರಣವಿತ್ತು. ಈ ವಿಡಿಯೋಗಳನ್ನು ಡಿಕೆಶಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಇದರ ಜೊತೆಗೆ ಸಾಲೊಂದನ್ನು ಬರೆದಿದ್ದಾರೆ. 'ಏರ್‌ಕಂಡೀಶನ್‌ ಸಿಟಿಯ ವೈಭವ ಮತ್ತೆ ಮರುಕಳಿಸಿದೆ. ತಿಂಗಳಾನುಗಟ್ಟಲೆ ಬಿಸಿಲ ಧಗೆಯ ನಂತರ ವರುಣನು ಬೆಂಗಳೂರಿನ ಮೇಲೆ ಕೃಪೆ ತೋರಿದ್ದಾನೆ. ಬಿಸಿಲ ಝಳದಿಂದ ಕೊನೆಗೂ ಮುಕ್ತಿ ಸಿಗುತ್ತಿದೆ. ದ್ವೇಷ- ಕೋಮು ದಳ್ಳುರಿಯ ಧಗೆಯಿಂದ ಮುಕ್ತಿ ಸಿಗಲು ಇನ್ನೊಂದು ತಿಂಗಳಷ್ಟೇ ಬಾಕಿ ಇದೆ' ಎಂದಿದ್ದಾರೆ. ಅವರ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದಕ್ಕೆ ಹಲವು ಇಂಟ್ರೆಸ್ಟಿಂಗ್ ಕಾಮೆಂಟ್ ಗಳು ಬಂದಿವೆ. ಇದು ಹಳೆಯ ವಿಡಿಯೋ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಹೊಸ ಸರ್ಕಾರ ಬರುತ್ತದೆ ಎಂದರೆ ಜೂನ್ ನಂತರ ನಿಮ್ಮ ಸರ್ಕಾರ ಪತನವಾಗುತ್ತದಾ ಸಾರ್ ಎಂದು ಕಾಲೆಳೆದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments